July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ನಿಡಿಗಲ್ ಅಂಗನವಾಡಿ ಕೇಂದ್ರದ ನೂತನ ಕಟ್ಟಡ ಕಾಮಗಾರಿ: ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಸಾಂಸ್ಕೃತಿಕ ಸ್ಪರ್ಧೆ: ಎ ಎ ಅಕಾಡೆಮಿ ಸಹಯೋಗದ ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ತಣ್ಣೀರುಪಂತ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಟೈಲರಿಂಗ್ ತರಬೇತಿ ಕಾರ್ಯಕ್ರಮ ಉದ್ಘಾಟನೆ

Suddi Udaya

ಬಂದಾರು: ಪೆರ್ಲ ಬೈಪಾಡಿ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನಕ್ಕೆ ವಾಸ್ತುಶಿಲ್ಪಿ ಪ್ರಸಾದ್ ಮುನಿಯoಗಳರವರು ಭೇಟಿ: ಕಾಮಗಾರಿಯ ಬಗ್ಗೆ ಸಮಾಲೋಚನೆ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya
error: Content is protected !!