July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

ಬೆಳ್ತಂಗಡಿ: ಸರಕಾರಿ ಆಸ್ಪತ್ರೆ ಹಾಗೂ ಡಯಾಲಿಸಿಸ್ ಘಟಕದಲ್ಲಿ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಬಗ್ಗೆ ಮಾಜಿ ಶಾಸಕ ವಸಂತ ಬಂಗೇರ ರವರು ಸಾರ್ವಜನಿಕರ ಆಗ್ರಹದ ಮೇರೆಗೆ ಇತ್ತೀಚೆಗೆ ಆಸ್ಪತ್ರೆಗೆ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿಯವರನ್ನು ತರಾಟೆ ತೆಗೆದುಕೊಂಡ ಹಿನ್ನಲೆಯಲ್ಲಿ ಇಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಮಾಜಿ ಶಾಸಕರ ಜೊತೆಯಲ್ಲಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭ ಮಾತನಾಡಿದ ಮಾಜಿ ಶಾಸಕ ವಸಂತ ಬಂಗೇರ ರು ತನ್ನ ಕೋರಿಕೆಯ ಹಿನ್ನಲೆಯಲ್ಲಿ ಶೇ.95 ರಷ್ಟು ಸಮಸ್ಯೆಗಳನ್ನು ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಬೆಳ್ತಂಗಡಿಯ ವೈದ್ಯಾಧಿಕಾರಿಗಳು ಸರಿಪಡಿಸಿದ್ದು ಅವರಿಗೆ ಜನತೆಯ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು.

ಹೆಚ್ಚುವರಿ ಎರಡು ಡಯಾಲಿಸಿಸ್ ಯಂತ್ರಗಳನ್ನು ಬೆಳ್ತಂಗಡಿಗೆ ನೀಡುವಲ್ಲಿ ಪ್ರಯತ್ನಿಸುವುದಾಗಿ ಜಿಲ್ಲಾ ಆರೋಗ್ಯಾಧಿಕಾರಿಗಳು ಈ ಸಂದರ್ಭ ತಿಳಿಸಿದರು.

ಜೂ. 17 ರಂದು ಅಪರಾಹ್ನ ಪುನಃ ಜಿಲ್ಲಾ ಆರೋಗ್ಯಾಧಿಕಾರಿಗಳು ಭೇಟಿ ನೀಡಲಿದ್ದಾರೆ.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ವಕ್ತಾರ, ನ್ಯಾಯಾವಾದಿ ಮನೋಹರ್ ಕುಮಾರ್ ಇಳಂತಿಲ, ಕಾರ್ಮಿಕ ಮುಖಂಡ ಹಾಗೂ ನ್ಯಾಯವಾದಿ ಬಿ ಎಂ ಭಟ್, ದಿನೇಶ್ ಕೋಟ್ಯಾನ್, ಡಾ| ಚಂದ್ರಕಾಂತ್ ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಮಿತ್ತಬಾಗಿಲು: ಕುಡಿದ ಮತ್ತಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಮಹಿಳೆಯ ಮೇಲೆ ಮಾರಾಕಾಸ್ತ್ರದಿಂದ ಹಲ್ಲೆ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: ಗುರುತಿಸಿದ ಹೊಸ ಸ್ಥಳದಲ್ಲಿ ಅವಶೇಷಗಳು ಪತ್ತೆ

Suddi Udaya

ಬಂದಾರು ಬಿಜೆಪಿ ಶಕ್ತಿಕೇಂದ್ರ ಮೈರೋಳ್ತಡ್ಕದಲ್ಲಿ ಮಹಾಸಂಪರ್ಕ ಅಭಿಯಾನ

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಿಂದ ಬಳಂಜ ಶಾಲೆಯಲ್ಲಿ ಕಾರ್ಯಾಗಾರ

Suddi Udaya
error: Content is protected !!