July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಕಲ್ಲೇರಿಯ ಪವರ್ ಮ್ಯಾನ್ ಸಂದೀಪ್ ಎಂ ರವರು ಮಂಗಳೂರಿನ ಮಲ್ಲಿಕಟ್ಟೆ ಕಾರ್ಯ ಮತ್ತು ಪಾಲನಾ ಶಾಖೆಗೆ ಪದೋನ್ನತಿ

Suddi Udaya

ಜು.20 ರಿಂದ ಉಜಿರೆ ಮಹಾವೀರ ಸಿಲ್ಕ್ಸ್ ಟೆಕ್ಸ್ ಟೈಲ್ಸ್ ಮತ್ತು ರೆಡಿಮೇಡ್ಸ್ ನಲ್ಲಿ ಆಷಾಢ ಆಟಿದ ಪರ್ಬ; ದರಕಡಿತ ಮಾರಾಟ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಪೋಸ್ಟರ್ ತಯಾರಿಕಾ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಪಿ.ಎಲ್.ಡಿ ಬ್ಯಾಂಕಿನ ನಿವೃತ್ತ ಸಿಬ್ಬಂದಿ ನವೀನ್ ಕುಮಾರ್ ಕೆ.ಎನ್. ನಿಧನ

Suddi Udaya

ಶಾಲೆತಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ದೇಶಕ ಸ್ಥಾನಕ್ಕೆ ಸಹಕಾರ ಭಾರತಿ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಗಣಿತ ಮರು ಪರೀಕ್ಷೆಯಲ್ಲಿ ಇಳಂತಿಲದ ಅನುಜ್ಞಾ ರಿಗೆ 5 ಅಂಕ ಹೆಚ್ಚು

Suddi Udaya
error: Content is protected !!