23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ನೆರಿಯ : ಬೆಂಕಿ ತಗುಲಿ ಹಾನಿಯಾದ ಮನೆಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸಂಘ ಹಾಗೂ ವಾಣಿ ಶಿಕ್ಷಣ ಸಂಸ್ಥೆಯಿಂದ ಭೇಟಿ

Suddi Udaya

ಬೆಳ್ತಂಗಡಿ: ಸವಿತಾ ಸಮಾಜದ ವತಿಯಿಂದ ಪೂವಪ್ಪ ಭಂಡಾರಿ ಹಾಗೂ ಮೋಹನ್ ಭಂಡಾರಿ ರವರಿಗೆ ಸನ್ಮಾನ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್‌ನಲ್ಲಿ ಚಿನ್ನೋತ್ಸವ ಪ್ರಾರಂಭ: 20 ಸಾವಿರದ ಡೈಮಂಡ್ ಖರೀದಿಗೆ 5 ಕಾರು ಗೆಲ್ಲುವ ಸುವರ್ಣಾವಕಾಶ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ನಾಳದಲ್ಲಿ ಅಯ್ಯಪ್ಪ ಪೂಜೆ- ಇರುಮುಡಿ ಕಟ್ಟುವ ಕಾರ್ಯಕ್ರಮ

Suddi Udaya
error: Content is protected !!