April 2, 2025
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ಸಾಮಾಜಿಕ ಜಾಲತಾಣದಲ್ಲಿ ಕುಣಿತ ಭಜನೆಯ ಕುರಿತು ಅವಹೇಳನ ಬರಹ : ಸೂಕ್ತ ಕಾನೂನು ಕ್ರಮಕ್ಕಾಗಿ ಕುಣಿತ ಭಜನಾ ತರಬೇತುದಾರರಿಂದ ಧರ್ಮಸ್ಥಳ ಠಾಣೆಯಲ್ಲಿ ದೂರು

Suddi Udaya

ಗೇರುಕಟ್ಟೆ: ಹಲೇಜಿ -ಕಲಾಯಿ ಸಂಪರ್ಕ ರಸ್ತೆಯ ಚೆಕ್ ಡ್ಯಾಮ್ ನಲ್ಲಿ ತುಂಬಿಕೊಂಡ ಮರದ ದಿಮ್ಮಿಗಳ ತೆರವು

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya

ಓಡಿಲ್ನಾಳ : ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ಧ್ವಜಾರೋಹಣ, ಪ್ರಥಮ ಜಾತ್ರೆ

Suddi Udaya

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya

ಉಜಿರೆ: ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜು ‘ವಿವಿಧ ಸಂಘಗಳ ಉದ್ಘಾಟನೆ’

Suddi Udaya
error: Content is protected !!