23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ಧರ್ಮಸ್ಥಳ-ಮಂಗಳೂರು ವೇಗದೂತ ಬಸ್ಸಿನ ಬೇಡಿಕೆಗಾಗಿ ರಾಜ್ಯ ಸಾರಿಗೆ ಅಧಿಕಾರಿಗಳನ್ನು ಭೇಟಿಯಾದ ಎಸ್‌ಡಿಪಿಐ ಬೆಳ್ತಂಗಡಿ ನಿಯೋಗ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶರ್ವಿನ್ ಮೋನಿಸ್ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಅ.17ರಂದು ವಿದ್ಯುತ್ ನಿಲುಗಡೆ

Suddi Udaya

ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya
error: Content is protected !!