25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಸಹಕಾರ ರತ್ನ ನಿರಂಜನ್ ಬಾವಂತಬೆಟ್ಟು ರವರಿಗೆ ಅಭಿಮಾನಿಗಳ ಮತ್ತು ಸಹಕಾರಿ ಬಂಧುಗಳಿಂದ ನುಡಿ ನಮನ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ನಿಡ್ಲೆ ಗ್ರಾಮ ಸೇವಾ ಸಮಿತಿ ನೇತೃತ್ವದಲ್ಲಿ ‘ಅಯೋಧ್ಯಾ ದೀಪ’ ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ಘಟಕದ ದೈನಂದಿನ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya

ಕೊಕ್ಕಡ ಗ್ರಾ.ಪಂ. ನ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

Suddi Udaya
error: Content is protected !!