September 6, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕುತ್ರೊಟ್ಟು ಬಳಿ ಮಗುವಿಗೆ ದ್ವಿಚಕ್ರ ವಾಹನ ಢಿಕ್ಕಿ

Suddi Udaya

ಪುತ್ತೂರಿನಲ್ಲಿ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಮತ್ತು ಶಶಿಕುಮಾರ್ ರೈ ಬಾಲ್ಯೋಟ್ಟುರವರಿಗೆ ಅಭಿವಂದನಾ ಕಾರ್ಯಕ್ರಮ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya
error: Content is protected !!