22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಸಬಲೀಕರಣ ಉಪನ್ಯಾಸ

ಬೆಳ್ತಂಗಡಿ : ಪ್ರಸನ್ನ ಪದವಿಪೂರ್ವ (ಎಎ ಅಕಾಡೆಮಿ) ಕಾಲೇಜಿನಲ್ಲಿ ಮಹಿಳಾಸಬಲೀಕರಣದ ಬಗ್ಗೆ ಉಪನ್ಯಾಸ ಕಾರ್ಯಕ್ರಮ ಜೂ.10ರಂದು ಜರುಗಿತು.
ಮುಖ್ಯ ಅತಿಥಿಯಾಗಿ ಆಗಮಿಸಿದ ರುಡ್‌ಸೆಟ್ ಸಂಸ್ಥೆಯ ಉಪನ್ಯಾಸಕಿ ಶ್ರೀಮತಿ ಅನುಸೂಯರವರು ಮಾತನಾಡಿ ಮಹಿಳೆಯರು ಅವಿಭಕ್ತ ಕುಟುಂಬದಿಂದ ಬೇರ್ಪಟ್ಟು ವಿಭಕ್ತ ಕುಟುಂಬವನ್ನು ನಡೆಸುವಲ್ಲಿ ಸಫಲತೆಯನ್ನು ಕಂಡಿದ್ದಾರೆ. ಅದೇ ರೀತಿ ಮಹಿಳೆಯರು ಸಬಲರಾಗಿ ಜೀವನ ಮಾಡಬೇಕಾದರೆ ನಮ್ಮಲ್ಲಿರುವ ನ್ಯೂನ್ಯತೆಗಳನ್ನು ನೋಡದೆ ಸಾಧನೆಯ ಬಗ್ಗೆ ಮಾತ್ರ ಯೋಚನೆ ಮಾಡಬೇಕೆಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಎ.ಎ ಅಕಾಡೆಮಿಯ ಆಡಳಿತ ಅಧಿಕಾರಿ ಶ್ರೀಮತಿ ಕೃಪಾ ಆರ್ ಅವರು ಹೆಣ್ಣು ಸಮಾಜದ ಕಣ್ಣು, ಎಲ್ಲಾ ರೀತಿಯಲ್ಲಿ ಹೆಣ್ಣು ಸಮಾನತೆಯನ್ನು ಪಡೆದು ಸಬಲೀಕರಣದ ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾಳೆ ಎಂದು ತಿಳಿಸಿದರು. ವೇದಿಕೆಯಲ್ಲಿ ರಸಾಯನ ಶಾಸ್ತ್ರ ವಿಭಾಗದ ಕಾವ್ಯ ಬಿ. ಆರ್ ಉಪಸ್ಥಿತರಿದ್ದರು. ರಹಿಯಾನ ಧನ್ಯವಾದ ಸಮರ್ಪಿಸಿ, ಆಯಿಷತ್ ಬಹೀಜ ಸ್ವಾಗತಿಸಿ, ಕನ್ನಡ ಉಪನ್ಯಾಸಕರಾದ ಸುಧೀರ್ ಆರ್ ಕಾರ್ಯಕ್ರಮ ನಿರೂಪಿಸಿದರು

Related posts

ಉಜಿರೆ: ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಪೋಷಕರ ಜಾಗೃತಿ ಕಾರ್ಯಕ್ರಮ

Suddi Udaya

ಮಂಗಳೂರು – ಧರ್ಮಸ್ಥಳ: ರಾಜಹಂಸ ಬಸ್ ಸೇವೆ ಪ್ರಾರಂಭ

Suddi Udaya

ಕಾರಿಂಜ ಸ.ಕಿ.ಪ್ರಾ. ಶಾಲೆಯ ಮಕ್ಕಳಿಗೆ ಉಚಿತ ಬ್ಯಾಗ್, ಪುಸ್ತಕ ಹಾಗೂ ಲೇಖನ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರಿಗೆ ಕಾರ್ಯಾಗಾರ

Suddi Udaya

ಬಂಡಾಜೆ ಕಾಡಿನಲ್ಲಿ ಗುಡ್ಡಜರಿತ

Suddi Udaya
error: Content is protected !!