38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲಿನಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ಮಾರ್ನಾಡ್ ರವರು ಭತ್ತದ ಬೀಜದ ಆಯ್ಕೆ, ಬಿಜೋಪಚಾರ, ಸಸಿ ಮಡಿಗೆ ಮಣ್ಣಿನ ಆಯ್ಕೆ ,ಸಸಿ ಮಡಿ ತಯಾರಿ, ನಾಟಿ ಗದ್ದೆಯ ತಯಾರಿ, ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಸೂರಪ್ಪ ಗೌಡ ವಚ್ಚರವರು ವಹಿಸಿಕೊಂಡರು.
ಪ್ರಗತಿಪರ ಕೃಷಿಕರಾದ ಸುರೇಶ್ ಮೂರ್ಲೆಗುಂಡಿ ಇವರು ಯಂತ್ರದ ಮೂಲಕ ಭತ್ತನಾಟಿಯ ಅನುಭವವನ್ನು ಹಂಚಿಕೊಂಡರು.
ಪ್ರಗತಿಪರ ಕೃಷಿಕರಾದ ಲೋಕಯ್ಯ ಗೌಡ ಉಪಸ್ಥಿತರಿದ್ದರು.

ಸೇವಾ-ಪ್ರತಿನಿಧಿಯಾದ ಆಶಾ ರವರು ಸ್ವಾಗತಿಸಿ ವಂದಿಸಿದರು.

Related posts

ಬುರುಡೆ ಪ್ರಕರಣ ಸಂಬಂಧ ನಾಲ್ಕು ಜನರಿಗೆ ಎಸ್.ಐ‌.ಟಿ‌ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ದ್ವಿತೀಯ ಪಿಯುಸಿ ಪರೀಕ್ಷೆ: ಹೆಚ್ಚುವರಿ ಬಸ್ ಇಲ್ಲದೆ ವಿದ್ಯಾರ್ಥಿಗಳ ಪರದಾಟ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಮಕ್ಕಳ ದಿನಾಚರಣೆ: ಹೆತ್ತವರ ಪೋಷಕರ/ಮಹಾಸಭೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

Suddi Udaya

ಕಡಿರುದ್ಯಾವರ :ಎರ್ಮಾಲ್ ಪಲ್ಕೆ ಸರಕಾರಿ ಬಾವಿಯಲ್ಲಿ ಪತ್ತೆಯಾದ ಶವ

Suddi Udaya
error: Content is protected !!