22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲಿನಲ್ಲಿ ಯಾಂತ್ರಿಕೃತವಾಗಿ ಭತ್ತದ ಬೇಸಾಯ “ಯಂತ್ರಶ್ರೀ” ತರಬೇತಿ

ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಉಜಿರೆ ವಲಯದ ಬೆಳಾಲಿನಲ್ಲಿ ಯಂತ್ರಶ್ರೀ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳ್ತಂಗಡಿ ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್ ಮಾರ್ನಾಡ್ ರವರು ಭತ್ತದ ಬೀಜದ ಆಯ್ಕೆ, ಬಿಜೋಪಚಾರ, ಸಸಿ ಮಡಿಗೆ ಮಣ್ಣಿನ ಆಯ್ಕೆ ,ಸಸಿ ಮಡಿ ತಯಾರಿ, ನಾಟಿ ಗದ್ದೆಯ ತಯಾರಿ, ಯಂತ್ರದ ಮೂಲಕ ಭತ್ತದ ಸಸಿಯ ನಾಟಿ,ಖರ್ಚು ಮತ್ತು ಆದಾಯದ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಸೂರಪ್ಪ ಗೌಡ ವಚ್ಚರವರು ವಹಿಸಿಕೊಂಡರು.
ಪ್ರಗತಿಪರ ಕೃಷಿಕರಾದ ಸುರೇಶ್ ಮೂರ್ಲೆಗುಂಡಿ ಇವರು ಯಂತ್ರದ ಮೂಲಕ ಭತ್ತನಾಟಿಯ ಅನುಭವವನ್ನು ಹಂಚಿಕೊಂಡರು.
ಪ್ರಗತಿಪರ ಕೃಷಿಕರಾದ ಲೋಕಯ್ಯ ಗೌಡ ಉಪಸ್ಥಿತರಿದ್ದರು.

ಸೇವಾ-ಪ್ರತಿನಿಧಿಯಾದ ಆಶಾ ರವರು ಸ್ವಾಗತಿಸಿ ವಂದಿಸಿದರು.

Related posts

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ನಾಪತ್ತೆಯಾಗಿದ್ದ ಮಾಚಾರು ನಿವಾಸಿ ಆಟೋ ಚಾಲಕ ಸುಧಾಕರ್ ಮೃತದೇಹ ನೆಲ್ಲಿಕಾರ್ ಕಾಡಿನಲ್ಲಿ ನೇಣು ಹಾಕಿಕೊಂಡ ರೀತಿಯಲ್ಲಿ ಪತ್ತೆ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ವೇಣೂರು-ಪೆರ್ಮುಡ ಹೊನಲು ಬೆಳಕಿನ 33ನೇ ವರ್ಷದ ಸೂರ್ಯ-ಚಂದ್ರ ಜೋಡುಕರೆ ಬಯಲು ಕಂಬಳ

Suddi Udaya

ಪುಂಜಾಲಕಟ್ಟೆ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

2024-25ನೇ ಸಾಲಿನ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!