July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಉಜಿರೆ: ರಾಜಾರಾಮ್ ಭಟ್ ನಿಧನ

Suddi Udaya

ಕೊಕ್ಕಡ ಸಂಗಮ್ ಯುವಕ ಮಂಡಲದ ಸದಸ್ಯರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya

ಅಂಡಿಂಜೆ: ಯುವಕ ಮಂಡಲದಿಂದ ಮೊಸರು ಕುಡಿಕೆ ಉತ್ಸವ, ವಿವಿಧ ಆಟೋಟ ಸ್ಪರ್ಧೆಗಳು

Suddi Udaya

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ ಅತ್ಯಾಚಾರ ಪ್ರಕರಣ; ಸಿಐಡಿಗೆ ಫೈಲ್ ವರ್ಗಾವಣೆ

Suddi Udaya
error: Content is protected !!