23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಚರಂಡಿಗೆ ಜಾರಿದ ಆಹಾರ ಉತ್ಪನ್ನಗಳ ಸಾಗಾಟದ ವಾಹನ

ಮುಂಡಾಜೆ: ಬೆಂಗಳೂರಿದ ಮೂಡಬಿದ್ರೆ ಕಡೆ ಸಾಗುತ್ತಿದ್ದ ಆಹಾರ ಉತ್ಪನ್ನಗಳ ಸಾಗಾಟದ ವಾಹನ ರಸ್ತೆ ಬದಿಯ ಚರಂಡಿಗೆ ಜಾರಿದ ಘಟನೆ ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆಯ ಸೋಮಂತಡ್ಕ ತಿರುವಿನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಚಾಲಕ ಹಾಗೂ ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ.

ಇದರಿಂದ ಹಲವು ಸಮಯ ಟ್ರಾಫಿಕ್ ಜಾಮ್ ಉಂಟಾಯಿತು. ಸ್ಥಳೀಯರಾದ ಸಚಿನ್ ಭಿಡೆ,ವಿಷ್ಣು ಪ್ರಸಾದ್ ಖಾಡಿಲ್ಕಾರ್, ಭರತ್, ಬಿಪಿನ್ ಜಾರ್ಜ್,ಗ್ರಾಪಂ ಸದಸ್ಯ ಜಗದೀಶ್ ನಾಯ್ಕ ಮತ್ತಿತರರು ಏಕಮುಖ ವಾಹನ ಸಂಚಾರ ವ್ಯವಸ್ಥೆ ಹಾಗೂ ವಾಹನ ಸ್ಥಳಾಂತರಿಸಲು ಸಹಕರಿಸಿದರು. ಮಳೆ ಆರಂಭವಾದ ಬಳಿಕ ಅಗಲ ಕಿರಿದಾದ ಹಾಗೂ ತಿರುವುಗಳಿರುವ ಈ ರಸ್ತೆಯಲ್ಲಿ ವಾಹನಗಳು ಉರುಳಿ ಬೀಳುವ ಘಟನೆ ಆಗಾಗ ಸಂಭವಿಸುತ್ತಿದೆ.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಯ್ಯೂರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕೊಕ್ರಾಡಿ: ದೇವೆಂದ್ರ ಹೆಗ್ಡೆಯವರ ಮಾತೃಶ್ರೀ ಕೊಡಂಗೆಗುತ್ತು ನೀಲಮ್ಮ ಹೆಗ್ಡೆ ನಿಧನ

Suddi Udaya

ತಣ್ಣೀರುಪಂತ : ಅಡಿಕೆ ಗೋದಾಮಿನ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು: ರೂ. 1.35ಲಕ್ಷ ಮೌಲ್ಯದ ಅಡಿಕೆ ಕಳ್ಳತನ

Suddi Udaya

ಕಣಿಯೂರು ಗ್ರಾಮ ಪಂಚಾಯತಿಯಲ್ಲಿ ಶಿಕ್ಷಣ ಸಂವಹನ ಕಾರ್ಯಕ್ರಮ

Suddi Udaya

‘ಮೃತ್ಯುಂಜಯ’ ಮೈರಲ್ಕೆ ಶ್ರೀ ಕಿರಾತಮೂರ್ತಿ ದೇವಸ್ಥಾನದ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya

ಪಡ್ಡಂದಡ್ಕ: ಕುರುಂಬಡ್ಕ ನಿವಾಸಿ ಕಬ್ಬು ನಿಧನ

Suddi Udaya
error: Content is protected !!