25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ವಾಲಿಬಾಲ್ ಪಂದ್ಯಾಟ: ವೇಣೂರು ವಿದ್ಯೋದಯ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡ ಪ್ರಥಮ ಸ್ಥಾನ

Suddi Udaya

ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆ: ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯ ವಿದ್ಯಾರ್ಥಿ ಜಾಹ್ನವಿ ದ್ವಿತೀಯ

Suddi Udaya

ವಾಣಿ ಶಿಕ್ಷಣ ಸಂಸ್ಥೆಯಲ್ಲಿ ಶಾರದಾ ಮಾತೆಯ ವಿಗ್ರಹ ಪಿಠಾರ್ಪಣೆ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ವತಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ ಬೆಳ್ತಂಗಡಿಯ ಚಿನ್ಮಯ್ ಜಿ.ಕೆ ಗೆ ಸನ್ಮಾನ

Suddi Udaya

ಶಿಬಾಜೆ : ಭಂಡಿಹೊಳೆ ಶ್ರೀಹರಿ ದಾಮಲೆ ನಿಧನ

Suddi Udaya
error: Content is protected !!