25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ವಾಣಿ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ನೇಜಿ ನಾಟಿ

Suddi Udaya

ಕಕ್ಕಿಂಜೆ: ಶ್ರೀ ಕೃಷ್ಣ ಆಸ್ಪತ್ರೆ ದಂತ ವೈದ್ಯಾಧಿಕಾರಿ ಡಾ| ಪ್ರಕೃತಿ ಶೆಟ್ಟಿ ರವರಿಗೆ ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕೊಕ್ಕಡ: ಮಾಸ್ತಿಕಲ್ಲು ಮಜಲು ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ಬಳಂಜ : ಸರ್ವೋದಯ ಫ್ರೆಂಡ್ಸ್ ಹಾಗೂ ಅಟ್ಲಾಜೆ ಸ.ಕಿ.ಪ್ರಾ. ಶಾಲೆಯ ಸಹಭಾಗಿತ್ವದಲ್ಲಿ ಕ್ರಿಕೆಟ್ ಪಂದ್ಯಾಟ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಣಾಳಿಕೆ ಬಿಡುಗಡೆ: ಪ್ರಣಾಳಿಕೆಯಲ್ಲಿರುವ ಅಂಶಗಳೇನು?

Suddi Udaya

ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!