22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಕುವೆಟ್ಟು ಮತ್ತು ಓಡಿಲ್ನಾಳ ಬಿಜೆಪಿ ಶಕ್ತಿ ಕೇಂದ್ರಗಳ ಅಭ್ಯಾಸ ವರ್ಗ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವ: ನೂತನ ಸಭಾಭವನದ ಉದ್ಘಾಟನೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಇಂಜಿನಿಯರ್ಸ್ ಡೇ ಆಚರಣೆ

Suddi Udaya

ಗುರುವಾಯನಕೆರೆ: ವಿದ್ವತ್ ಕ್ಲಾಸ್ ಕನೆಕ್ಟ್ ಉದ್ಘಾಟನೆ ಹಾಗೂ ಓರಿಯೆಂಟೇಷನ್ ಕಾರ್ಯಕ್ರಮ

Suddi Udaya

ಗಂಡಿಬಾಗಿಲು ಸೈಂಟ್ ಥೋಮಸ್ ಚರ್ಚ್‌ ಮತ್ತು ಗ್ರೋಟ್ಟೊ ಕಾಣಿಕೆ ಡಬ್ಬಿ ಕಳ್ಳತನ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಪತ್ತೆಯಾದ ಬಂದೂಕು ಪ್ರಕರಣ ಮಧ್ಯಂತರ ತಡೆ ಮುಂದೂಡಿದ ಹೈಕೋರ್ಟ್

Suddi Udaya
error: Content is protected !!