37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ರವಿ ಕಟಪಾಡಿಯವರ ಸಮಾಜಮುಖಿ ಕೆಲಸ ಕಾರ್ಯಕ್ಕೆ ದೈವಸ್ಥಾನದ ವತಿಯಿಂದ ರೂ 10 ಸಾವಿರ ನೀಡಿ ಅಶಕ್ತರಿಗೆ ನೀವು ವಿನಿಯೋಗಿಸಿ, ಇದೊಂದು ನಮ್ಮ ಪುಟ್ಟ ಅಳಿಲು ಸೇವೆ ಎಂದರು. ಇದನ್ನು ಸ್ವೀಕರಿಸಿದ ರವಿಕಟಪಾಡಿಯವರು ಕೆಲವೇ ಕೆಲವು ಹೊತ್ತಿನಲ್ಲಿ ವೇದಿಕೆಯಿಂದ ಕೆಳಗಿಳಿಯುತ್ತಲೆ ಅಳದಂಗಡಿ ಪರಿಸರದ ಯುವಕ ಅನಾರೊಗ್ಯದಿಂದ ಬಳಲುತ್ತಿರುವ ಕೀರ್ತನ್ ಇವರಿಗೆ ಆ ಮೊತ್ತವನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದರು. ನಿಜವಾಗಿಯು ರವಿಕಟಪಾಡಿಯವರು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಒಂದಷ್ಟು ಕ್ಷಣ ಯೋಚಿಸದೆ ಆ ಕ್ಷಣವೆ ಮಿಡಿದ ಮನಸ್ಸಿಗೆ ನಾವುಗಳು ಮೂಕವಿಸ್ಮಿತರಾದೆವು. ರವಿ ಕಟಪಾಡಿಯವರಿಗೆ ಅಳದಂಗಡಿಯ ಶ್ರೀ ಸತ್ಯದೇವತೆ ಹಾಗೂ ಶ್ರೀ ಸೋಮನಾಥೇಶ್ವರಿ ಅಮ್ಮನವರ ಶ್ರೀ ರಕ್ಷೆ ಸದಾ ಕಾಲ ಇರಲೆಂದು ಅಳದಂಗಡಿಯ ಯುವಕರು ಆಶಿಸಿದರು.

Related posts

ಮರೋಡಿಯಲ್ಲಿ ಪ್ರಕಾಶಮಾನವಾಗಿ ಕಂಗೊಳಿಸುತ್ತಿರುವ ಕೂಕ್ರಬೆಟ್ಟು ಸರಕಾರಿ ಶಾಲೆ: ರೂ.1.10 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಶಾಲಾ ಕಟ್ಟಡ, ರಾಷ್ಟ್ರ ಧ್ವಜ ಕಟ್ಟೆ ಉದ್ಘಾಟನೆ,

Suddi Udaya

ಬಾರ್ಯ: ಬನ್ನೆoಗಳ ಸೇತುವೆ ಮೇಲೆ ಪ್ರಾಣಿ ತ್ಯಾಜ್ಯ ಎಸೆದು ವಿಕೃತಿ ಮೆರೆದ ಕಿಡಿಗೇಡಿಗಳು

Suddi Udaya

ಜ.18: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಸಾಮಾನ್ಯ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ಚಿಕಿತ್ಸಾ ಶಿಬಿರ

Suddi Udaya

ಕೊಕ್ಕಡ: ಹಳ್ಳಿಂಗೇರಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ನ ನವೀಕೃತ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ 38ನೇ ವರ್ಷದ ಮಕರ ಸಂಕ್ರಮಣೋತ್ಸವ; ಧಾರ್ಮಿಕ ಸಭೆ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ಶಿಶಿಲದಿಂದ ಪೇರಿಕೆ ಹೋಗುವ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ವಿದ್ಯುತ್ ಕಂಬಗಳ ಮೇಲೆ ಬಿದ್ದಿದ್ದು, ಸಂಚಾರಕ್ಕೆ ತೊಂದರೆ

Suddi Udaya
error: Content is protected !!