26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ರವಿ ಕಟಪಾಡಿಯವರ ಸಮಾಜಮುಖಿ ಕೆಲಸ ಕಾರ್ಯಕ್ಕೆ ದೈವಸ್ಥಾನದ ವತಿಯಿಂದ ರೂ 10 ಸಾವಿರ ನೀಡಿ ಅಶಕ್ತರಿಗೆ ನೀವು ವಿನಿಯೋಗಿಸಿ, ಇದೊಂದು ನಮ್ಮ ಪುಟ್ಟ ಅಳಿಲು ಸೇವೆ ಎಂದರು. ಇದನ್ನು ಸ್ವೀಕರಿಸಿದ ರವಿಕಟಪಾಡಿಯವರು ಕೆಲವೇ ಕೆಲವು ಹೊತ್ತಿನಲ್ಲಿ ವೇದಿಕೆಯಿಂದ ಕೆಳಗಿಳಿಯುತ್ತಲೆ ಅಳದಂಗಡಿ ಪರಿಸರದ ಯುವಕ ಅನಾರೊಗ್ಯದಿಂದ ಬಳಲುತ್ತಿರುವ ಕೀರ್ತನ್ ಇವರಿಗೆ ಆ ಮೊತ್ತವನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದರು. ನಿಜವಾಗಿಯು ರವಿಕಟಪಾಡಿಯವರು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಒಂದಷ್ಟು ಕ್ಷಣ ಯೋಚಿಸದೆ ಆ ಕ್ಷಣವೆ ಮಿಡಿದ ಮನಸ್ಸಿಗೆ ನಾವುಗಳು ಮೂಕವಿಸ್ಮಿತರಾದೆವು. ರವಿ ಕಟಪಾಡಿಯವರಿಗೆ ಅಳದಂಗಡಿಯ ಶ್ರೀ ಸತ್ಯದೇವತೆ ಹಾಗೂ ಶ್ರೀ ಸೋಮನಾಥೇಶ್ವರಿ ಅಮ್ಮನವರ ಶ್ರೀ ರಕ್ಷೆ ಸದಾ ಕಾಲ ಇರಲೆಂದು ಅಳದಂಗಡಿಯ ಯುವಕರು ಆಶಿಸಿದರು.

Related posts

ಉಜಿರೆ: ಶಿಕ್ಷಕರ ದಿನಾಚರಣೆಯ ಅಂಗವಾಗಿ ನಡೆದ ಹಲವು ಸ್ಪರ್ಧೆಗಳಲ್ಲಿ ಎಸ್.ಡಿ.ಎಮ್ ಅನುದಾನಿತ ಸೆಕೆಂಡರಿ ಶಾಲೆಗೆ ಪ್ರಶಸ್ತಿ

Suddi Udaya

ಮೊರಾರ್ಜಿ ದೇಸಾಯಿ/ಇಂದಿರಾಗಾಂಧಿ/ ಡಾ. ಬಿಆರ್ ಅಂಬೇಡ್ಕರ್/ನಾರಾಯಣ ಗುರು ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ನಾರಾವಿ ಭಾರತೀಯ ಜೈನ್ ಮಿಲನ್ ವತಿಯಿಂದ ವಿಶೇಷ ಆಟಿದ ಕೂಟ, ಜಿನ ಭಜನಾ ಪುಸ್ತಕ ಬಿಡುಗಡೆ ಮತ್ತು ಪರಮ ಪೂಜ್ಯ ಆಚಾರ್ಯ 108 ಕಾಮಕುಮಾರ ನಂದಿ ಮಹಾರಾಜರ ವಿನಯಾಂಜಲಿ ಸಭೆ,

Suddi Udaya

ದ.ಕ ಜಿಲ್ಲಾ ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಗೆ ಸದಸ್ಯರಾಗಿ ಕೆ.ಎಮ್ ಅಬ್ದುಲ್‌ ಕರೀಮ್ ಹಾಗೂ ಜಯರಾಮ್ ಅಲಂಗಾರು ಆಯ್ಕೆ

Suddi Udaya

ಮಹಾಕುಂಭ ಮೇಳದಲ್ಲಿ ಗರ್ಡಾಡಿ, ನಿಟ್ಟಡೆ ಪಡಂಗಡಿ ಶಕ್ತಿ ಕೇಂದ್ರದ ಪ್ರಮುಖ್ ರಿಂದ ಪುಣ್ಯಸ್ನಾನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದ ಮಹಾಗಣಪತಿ ದೇವರ ಪೂಜೆಯನ್ನು ಸುದೀರ್ಘ ಕಾಲ ನೇರವೇರಿಸಿದ ಬಾಲಕೃಷ್ಣ ಭಟ್ ನಿಧನ

Suddi Udaya
error: Content is protected !!