September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ರವಿ ಕಟಪಾಡಿಯವರ ಸಮಾಜಮುಖಿ ಕೆಲಸ ಕಾರ್ಯಕ್ಕೆ ದೈವಸ್ಥಾನದ ವತಿಯಿಂದ ರೂ 10 ಸಾವಿರ ನೀಡಿ ಅಶಕ್ತರಿಗೆ ನೀವು ವಿನಿಯೋಗಿಸಿ, ಇದೊಂದು ನಮ್ಮ ಪುಟ್ಟ ಅಳಿಲು ಸೇವೆ ಎಂದರು. ಇದನ್ನು ಸ್ವೀಕರಿಸಿದ ರವಿಕಟಪಾಡಿಯವರು ಕೆಲವೇ ಕೆಲವು ಹೊತ್ತಿನಲ್ಲಿ ವೇದಿಕೆಯಿಂದ ಕೆಳಗಿಳಿಯುತ್ತಲೆ ಅಳದಂಗಡಿ ಪರಿಸರದ ಯುವಕ ಅನಾರೊಗ್ಯದಿಂದ ಬಳಲುತ್ತಿರುವ ಕೀರ್ತನ್ ಇವರಿಗೆ ಆ ಮೊತ್ತವನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದರು. ನಿಜವಾಗಿಯು ರವಿಕಟಪಾಡಿಯವರು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಒಂದಷ್ಟು ಕ್ಷಣ ಯೋಚಿಸದೆ ಆ ಕ್ಷಣವೆ ಮಿಡಿದ ಮನಸ್ಸಿಗೆ ನಾವುಗಳು ಮೂಕವಿಸ್ಮಿತರಾದೆವು. ರವಿ ಕಟಪಾಡಿಯವರಿಗೆ ಅಳದಂಗಡಿಯ ಶ್ರೀ ಸತ್ಯದೇವತೆ ಹಾಗೂ ಶ್ರೀ ಸೋಮನಾಥೇಶ್ವರಿ ಅಮ್ಮನವರ ಶ್ರೀ ರಕ್ಷೆ ಸದಾ ಕಾಲ ಇರಲೆಂದು ಅಳದಂಗಡಿಯ ಯುವಕರು ಆಶಿಸಿದರು.

Related posts

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ತುಳು ಸಂಸ್ಕೃತಿ ಕುರಿತ ‘ಐಸಿರ’ ಕಾರ್ಯಕ್ರಮ

Suddi Udaya

ಹೆದ್ದಾರಿ ಅಧಿಕಾರಿಗಳ ಗೈರು-ಕೋರಂ ಕೊರತೆ: ಕುವೆಟ್ಟು ಗ್ರಾಮಸಭೆ ಮುಂದೂಡಿಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಲಾಯಿಲ: ಪಡ್ಲಾಡಿ ದ.ಕ.ಜಿ.ಪಂ ಶಾಲೆಯ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!