23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ:ನಿಸ್ವಾರ್ಥ ಸೇವೆಗೆ ಸ್ಪೂರ್ತಿಯ ಸೆಲೆಯಾದ ರವಿಕಟಪಾಡಿ: ಕಿರ್ತನ್ ಅವರ ವೈದ್ಯಕೀಯ ಚಿಕಿತ್ಸೆಗೆ ರೂ.10 ಸಾವಿರ ಹಸ್ತಾಂತರ

ಅಳದಂಗಡಿ :ಶ್ರೀ ಸತ್ಯದೇವತೆ ದೈವಸ್ಥಾನದಲ್ಲಿ ನಡೆದ ಪುಸ್ತಕ ವಿತರಣೆಯ ಸಮಾರೋಪ ಸಮಾರಂಭದಲ್ಲಿ ಸಮಾಜ ಸೇವಕ ರವಿ ಕಟಪಾಡಿ ಯವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ಶ್ರೀ ಸತ್ಯದೇವತೆ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಶಿವಪ್ರಸಾದ್ ಅಜಿಲರು ರವಿ ಕಟಪಾಡಿಯವರ ಸಮಾಜಮುಖಿ ಕೆಲಸ ಕಾರ್ಯಕ್ಕೆ ದೈವಸ್ಥಾನದ ವತಿಯಿಂದ ರೂ 10 ಸಾವಿರ ನೀಡಿ ಅಶಕ್ತರಿಗೆ ನೀವು ವಿನಿಯೋಗಿಸಿ, ಇದೊಂದು ನಮ್ಮ ಪುಟ್ಟ ಅಳಿಲು ಸೇವೆ ಎಂದರು. ಇದನ್ನು ಸ್ವೀಕರಿಸಿದ ರವಿಕಟಪಾಡಿಯವರು ಕೆಲವೇ ಕೆಲವು ಹೊತ್ತಿನಲ್ಲಿ ವೇದಿಕೆಯಿಂದ ಕೆಳಗಿಳಿಯುತ್ತಲೆ ಅಳದಂಗಡಿ ಪರಿಸರದ ಯುವಕ ಅನಾರೊಗ್ಯದಿಂದ ಬಳಲುತ್ತಿರುವ ಕೀರ್ತನ್ ಇವರಿಗೆ ಆ ಮೊತ್ತವನ್ನು ಹಸ್ತಾಂತರಿಸಿ ಮಾನವೀಯತೆ ಮೆರೆದರು. ನಿಜವಾಗಿಯು ರವಿಕಟಪಾಡಿಯವರು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿದ್ದಾರೆ ಒಂದಷ್ಟು ಕ್ಷಣ ಯೋಚಿಸದೆ ಆ ಕ್ಷಣವೆ ಮಿಡಿದ ಮನಸ್ಸಿಗೆ ನಾವುಗಳು ಮೂಕವಿಸ್ಮಿತರಾದೆವು. ರವಿ ಕಟಪಾಡಿಯವರಿಗೆ ಅಳದಂಗಡಿಯ ಶ್ರೀ ಸತ್ಯದೇವತೆ ಹಾಗೂ ಶ್ರೀ ಸೋಮನಾಥೇಶ್ವರಿ ಅಮ್ಮನವರ ಶ್ರೀ ರಕ್ಷೆ ಸದಾ ಕಾಲ ಇರಲೆಂದು ಅಳದಂಗಡಿಯ ಯುವಕರು ಆಶಿಸಿದರು.

Related posts

ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳ ಸಮಾರೋಪ ಸಮಾರಂಭ ಪ್ರತಿಭಾ ದಿನ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಹತ್ಯಡ್ಕ ವಿಠೋಬಾ ರುಕುಮಾಯಿ ದೇಗುಲಕ್ಕೆ ದೇಣಿಗೆ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!