25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ ಒಳಗಾಗಿ, ಪಂಚಾಯತದ ವಿದ್ಯುತ್ ಸಂಪರ್ಕ ಸುಟ್ಟು ಹೋಗಿ, ಕಂಪ್ಯೂಟರ್ ಸೇರಿದಂತೆ ಇತರ ಸೋತ್ತುಗಳು ಹಾನಿಗೆ ಒಳಗಾದ ಘಟನೆ ನಡೆದಿದೆ.

ಮಧ್ಯಾಹ್ನ ಸುಮಾರು 2.30ಕ್ಕೆ ಪಂಚಾಯತದ ಬಳಿಯ ಟವರ್‌ಗೆ ಭೀಕರ ಸಿಡಿಲು ಬಡಿದಿದೆ. ಸಿಡಿಲಿನ ಅಘಾತಕ್ಕೆ ಪಂಚಾಯತು ಬಳಿಯ ಹಾಲ್‌ನಲ್ಲಿ ಆರೋಗ್ಯ ಮತ್ತು ಗ್ರಾಮ ನೈರ್ಮಲ್ಯ ಸಮಿತಿಯ ಸಭೆಯಲ್ಲಿದ್ದ ಪಂಚಾಯತು ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಮತ್ತು ಆರು ಮಂದಿ ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತದಲ್ಲಿದ್ದ ಪಿಡಿಒ ಗೀತಾ ಸಾಲಿಯಾನ್ ಹಾಗೂ ಸಿಬ್ಬಂದಿಗಳು ವಿದ್ಯುತ್ ಶಾಕ್‌ಗೆ ಒಳಗಾಗಿ ಒಂದು ನಿಮಿಷ ಏನೂ ನಡೆದಿದೆ ಎಂದು ತಿಳಿಯಲಾರದ ಸ್ಥಿತಿಗೆ ತಲುಪಿದ್ದರು.
ಸಿಡಿಲಿನ ಅಘಾತಕ್ಕೆ ಪಂಚಾಯದ ವಿದ್ಯುತ್ ಸಂಪರ್ಕ, ಸೋಲಾರ್ ಸಿಸ್ಟಂ ಸಂಪೂರ್ಣ ಸುಟ್ಟು ಹೋಗಿದೆ. ಕಂಪ್ಯೂಟರ್ ಸೇರಿದಂತೆ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿದೆ. ಪಂಚಾಯತು ಬಳಿಯ ಹಾಲ್‌ನ ಗೋಡೆ ಬಿರುಕು ಬಿಟ್ಟಿದ್ದು, ಸಿಮೆಂಟಿನ ಒಂದು ಭಾಗ ಆಶಾ ಕಾರ್ಯಕರ್ತರೋರ್ವರ ಬೆನ್ನ ಮೇಲೆ ಬಿದ್ದರೂ ಯಾವುದೇ ಸಮಸ್ಯೆಯಾಗಿಲ್ಲ, ವಿದ್ಯುತ್ ಶಾಕ್‌ಗೆ ಒಳಗಾದ ಎಲ್ಲರೂ ಈಗ ಚೇತರಿಸಿಕೊಂಡಿದ್ದಾರೆ.


ಸಿಡಿಲಿನ ಅಘಾತದ ಬಗ್ಗೆ ಮಾಹಿತಿ ದೊರೆತ ತಕ್ಷಣ ‘ಸುದ್ದಿ ಉದಯ’ ಪಿಡಿಒ ಗೀತಾ ಸಾಲಿಯಾನ್ ಅವರು ಸಂಪರ್ಕಿಸಿದಾಗ ನಾನು ಸಿಡಿಲಿನ ಆಘಾತಕ್ಕೆ ಒಳಾಗಿದ್ದೆ. ಕೈ, ಕಾಲಲ್ಲಿ ಬಲ ಇಲ್ಲದ ಸ್ಥಿತಿಯಾಗಿತ್ತು, ಪಂಚಾಯತದಲ್ಲಿದ್ದ ಎಲ್ಲಾ ಸಿಬ್ಬಂದಿಗಳಿಗೂ ಈ ಅನುಭವ ಆಗಿದೆ. ಸಿಡಿಲು ಬಡಿದಾಗ ದೊಡ್ಡ ಬಾಂಬು ಸಿಡಿದಂತೆ ಶಬ್ದವಾಗಿ ಬೆಂಕಿಯ ಹುಂಡೆ ಕಾಣಿಸಿದೆ. ಪಂಚಾಯತದ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿರಬಹುದು. ಮೆಸ್ಕಾಂನವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸ ಬಳಿಕವಷ್ಟೇ ಏನಾಗಿದೆ ಎಂದು ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ.

Related posts

ತಾಲೂಕು ಆಸ್ಪತ್ರೆಯ ಆರೋಗ್ಯ ರಕ್ಷಾ ಸಮಿತಿಯ ನಾಮನಿರ್ದೇಶಿತ ಸದಸ್ಯರಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ, ಅಭಿನಂದನೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ 137.95 ಕೋಟಿ ವ್ಯವಹಾರ, ರೂ. 53.26 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ 9.50 ಡಿವಿಡೆಂಟ್

Suddi Udaya

ಉಜಿರೆ :ರೋಟರಿ ಕ್ಲಬ್ ನಲ್ಲಿ ಇಫ್ತಾರ್ ಆಚರಣೆ

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಮಡಂತ್ಯಾರು: ಸುವೇಗಾ ಮೋಟಾರ್ಸ್ ನಲ್ಲಿ ಹೀರೋ ಡೆಸ್ಟಿನಿ- 125 ಮಾರುಕಟ್ಟೆಗೆ ಬಿಡುಗಡೆ

Suddi Udaya

ಮುಂಡಾಜೆ: ರಾಷ್ಟ್ರೀಯ ಹೆದ್ದಾರಿ ಬದಿ ತ್ಯಾಜ್ಯ ರಾಶಿ

Suddi Udaya
error: Content is protected !!