March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ ಒಳಗಾಗಿ, ಪಂಚಾಯತದ ವಿದ್ಯುತ್ ಸಂಪರ್ಕ ಸುಟ್ಟು ಹೋಗಿ, ಕಂಪ್ಯೂಟರ್ ಸೇರಿದಂತೆ ಇತರ ಸೋತ್ತುಗಳು ಹಾನಿಗೆ ಒಳಗಾದ ಘಟನೆ ನಡೆದಿದೆ.

ಮಧ್ಯಾಹ್ನ ಸುಮಾರು 2.30ಕ್ಕೆ ಪಂಚಾಯತದ ಬಳಿಯ ಟವರ್‌ಗೆ ಭೀಕರ ಸಿಡಿಲು ಬಡಿದಿದೆ. ಸಿಡಿಲಿನ ಅಘಾತಕ್ಕೆ ಪಂಚಾಯತು ಬಳಿಯ ಹಾಲ್‌ನಲ್ಲಿ ಆರೋಗ್ಯ ಮತ್ತು ಗ್ರಾಮ ನೈರ್ಮಲ್ಯ ಸಮಿತಿಯ ಸಭೆಯಲ್ಲಿದ್ದ ಪಂಚಾಯತು ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಮತ್ತು ಆರು ಮಂದಿ ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತದಲ್ಲಿದ್ದ ಪಿಡಿಒ ಗೀತಾ ಸಾಲಿಯಾನ್ ಹಾಗೂ ಸಿಬ್ಬಂದಿಗಳು ವಿದ್ಯುತ್ ಶಾಕ್‌ಗೆ ಒಳಗಾಗಿ ಒಂದು ನಿಮಿಷ ಏನೂ ನಡೆದಿದೆ ಎಂದು ತಿಳಿಯಲಾರದ ಸ್ಥಿತಿಗೆ ತಲುಪಿದ್ದರು.
ಸಿಡಿಲಿನ ಅಘಾತಕ್ಕೆ ಪಂಚಾಯದ ವಿದ್ಯುತ್ ಸಂಪರ್ಕ, ಸೋಲಾರ್ ಸಿಸ್ಟಂ ಸಂಪೂರ್ಣ ಸುಟ್ಟು ಹೋಗಿದೆ. ಕಂಪ್ಯೂಟರ್ ಸೇರಿದಂತೆ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿದೆ. ಪಂಚಾಯತು ಬಳಿಯ ಹಾಲ್‌ನ ಗೋಡೆ ಬಿರುಕು ಬಿಟ್ಟಿದ್ದು, ಸಿಮೆಂಟಿನ ಒಂದು ಭಾಗ ಆಶಾ ಕಾರ್ಯಕರ್ತರೋರ್ವರ ಬೆನ್ನ ಮೇಲೆ ಬಿದ್ದರೂ ಯಾವುದೇ ಸಮಸ್ಯೆಯಾಗಿಲ್ಲ, ವಿದ್ಯುತ್ ಶಾಕ್‌ಗೆ ಒಳಗಾದ ಎಲ್ಲರೂ ಈಗ ಚೇತರಿಸಿಕೊಂಡಿದ್ದಾರೆ.


ಸಿಡಿಲಿನ ಅಘಾತದ ಬಗ್ಗೆ ಮಾಹಿತಿ ದೊರೆತ ತಕ್ಷಣ ‘ಸುದ್ದಿ ಉದಯ’ ಪಿಡಿಒ ಗೀತಾ ಸಾಲಿಯಾನ್ ಅವರು ಸಂಪರ್ಕಿಸಿದಾಗ ನಾನು ಸಿಡಿಲಿನ ಆಘಾತಕ್ಕೆ ಒಳಾಗಿದ್ದೆ. ಕೈ, ಕಾಲಲ್ಲಿ ಬಲ ಇಲ್ಲದ ಸ್ಥಿತಿಯಾಗಿತ್ತು, ಪಂಚಾಯತದಲ್ಲಿದ್ದ ಎಲ್ಲಾ ಸಿಬ್ಬಂದಿಗಳಿಗೂ ಈ ಅನುಭವ ಆಗಿದೆ. ಸಿಡಿಲು ಬಡಿದಾಗ ದೊಡ್ಡ ಬಾಂಬು ಸಿಡಿದಂತೆ ಶಬ್ದವಾಗಿ ಬೆಂಕಿಯ ಹುಂಡೆ ಕಾಣಿಸಿದೆ. ಪಂಚಾಯತದ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿರಬಹುದು. ಮೆಸ್ಕಾಂನವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸ ಬಳಿಕವಷ್ಟೇ ಏನಾಗಿದೆ ಎಂದು ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ.

Related posts

ನಿಡ್ಲೆಯಲ್ಲಿ ವರ್ಧಮಾನ ಗ್ಯಾಂಡ್ ಇನ್ ವಸತಿ ಗೃಹ ಶುಭಾರಂಭ

Suddi Udaya

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya

ಕಿಲ್ಲೂರು ನಿವಾಸಿ ವೀರಮ್ಮ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya

ಮದ್ದಡ್ಕ: ಕಿನ್ನಿಗೋಳಿ ಎಂಬಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿ

Suddi Udaya

ಗೇರುಕಟ್ಟೆ: ಯಕ್ಷೋತ್ಸವ ಕಾರ್ಯಕ್ರಮ ಉದ್ಘಾಟನೆ

Suddi Udaya
error: Content is protected !!