July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುವೆಟ್ಟು ಗ್ರಾ.ಪಂ ಬಳಿ ಟವರ್‌ಗೆ ಬಡಿದ ಸಿಡಿಲು: ಪಿಡಿಒ, ಸದಸ್ಯರು ಸಹಿತ ಸಿಬ್ಬಂದಿಗಳಿಗೆ ಸಿಡಿಲಿನ ಅಘಾತ: ಪಂಚಾಯತು ವಿದ್ಯುತ್ ಉಪಕರಣಗಳಿಗೆ ಹಾನಿ: ಬಿರುಕು ಬಿಟ್ಟ ಸಭಾಂಗಣ: ಪಾರಾದ ಆಶಾ ಕಾರ್ಯಕರ್ತೆಯರು

ಗುರುವಾಯನಕೆರೆ: ಇಂದು ಮಧ್ಯಾಹ್ನ ಕುವೆಟ್ಟು ಗ್ರಾಮ ಪಂಚಾಯತದ ಬಳಿಯ ಟವರಿಗೆ ಸಿಡಿಲು ಬಡಿದ ಪರಿಣಾಮ ಗ್ರಾಮ ಪಂಚಾಯತದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಡಿಒ ಮತ್ತು ಸಿಬ್ಬಂದಿಗಳು ಮತ್ತು ಪಂಚಾಯತು ಬಳಿಯ ಹಾಲ್‌ನಲ್ಲಿದ್ದ ಆಶಾ ಕಾರ್ಯಕರ್ತೆಯರು ಸಿಡಿಲಿನ ಆಘಾತಕ್ಕೆ ಒಳಗಾಗಿ, ಪಂಚಾಯತದ ವಿದ್ಯುತ್ ಸಂಪರ್ಕ ಸುಟ್ಟು ಹೋಗಿ, ಕಂಪ್ಯೂಟರ್ ಸೇರಿದಂತೆ ಇತರ ಸೋತ್ತುಗಳು ಹಾನಿಗೆ ಒಳಗಾದ ಘಟನೆ ನಡೆದಿದೆ.

ಮಧ್ಯಾಹ್ನ ಸುಮಾರು 2.30ಕ್ಕೆ ಪಂಚಾಯತದ ಬಳಿಯ ಟವರ್‌ಗೆ ಭೀಕರ ಸಿಡಿಲು ಬಡಿದಿದೆ. ಸಿಡಿಲಿನ ಅಘಾತಕ್ಕೆ ಪಂಚಾಯತು ಬಳಿಯ ಹಾಲ್‌ನಲ್ಲಿ ಆರೋಗ್ಯ ಮತ್ತು ಗ್ರಾಮ ನೈರ್ಮಲ್ಯ ಸಮಿತಿಯ ಸಭೆಯಲ್ಲಿದ್ದ ಪಂಚಾಯತು ಸದಸ್ಯರಾದ ಮಂಜುನಾಥ ಕುಂಬ್ಲೆ, ಶ್ರೀಮತಿ ರಚನಾ ಮತ್ತು ಆರು ಮಂದಿ ಆಶಾ ಕಾರ್ಯಕರ್ತೆಯರು ಹಾಗೂ ಪಂಚಾಯತದಲ್ಲಿದ್ದ ಪಿಡಿಒ ಗೀತಾ ಸಾಲಿಯಾನ್ ಹಾಗೂ ಸಿಬ್ಬಂದಿಗಳು ವಿದ್ಯುತ್ ಶಾಕ್‌ಗೆ ಒಳಗಾಗಿ ಒಂದು ನಿಮಿಷ ಏನೂ ನಡೆದಿದೆ ಎಂದು ತಿಳಿಯಲಾರದ ಸ್ಥಿತಿಗೆ ತಲುಪಿದ್ದರು.
ಸಿಡಿಲಿನ ಅಘಾತಕ್ಕೆ ಪಂಚಾಯದ ವಿದ್ಯುತ್ ಸಂಪರ್ಕ, ಸೋಲಾರ್ ಸಿಸ್ಟಂ ಸಂಪೂರ್ಣ ಸುಟ್ಟು ಹೋಗಿದೆ. ಕಂಪ್ಯೂಟರ್ ಸೇರಿದಂತೆ ವಿದ್ಯುತ್ ಉಪಕರಣಗಳು ಹಾನಿಗೊಳಗಾಗಿದೆ. ಪಂಚಾಯತು ಬಳಿಯ ಹಾಲ್‌ನ ಗೋಡೆ ಬಿರುಕು ಬಿಟ್ಟಿದ್ದು, ಸಿಮೆಂಟಿನ ಒಂದು ಭಾಗ ಆಶಾ ಕಾರ್ಯಕರ್ತರೋರ್ವರ ಬೆನ್ನ ಮೇಲೆ ಬಿದ್ದರೂ ಯಾವುದೇ ಸಮಸ್ಯೆಯಾಗಿಲ್ಲ, ವಿದ್ಯುತ್ ಶಾಕ್‌ಗೆ ಒಳಗಾದ ಎಲ್ಲರೂ ಈಗ ಚೇತರಿಸಿಕೊಂಡಿದ್ದಾರೆ.


ಸಿಡಿಲಿನ ಅಘಾತದ ಬಗ್ಗೆ ಮಾಹಿತಿ ದೊರೆತ ತಕ್ಷಣ ‘ಸುದ್ದಿ ಉದಯ’ ಪಿಡಿಒ ಗೀತಾ ಸಾಲಿಯಾನ್ ಅವರು ಸಂಪರ್ಕಿಸಿದಾಗ ನಾನು ಸಿಡಿಲಿನ ಆಘಾತಕ್ಕೆ ಒಳಾಗಿದ್ದೆ. ಕೈ, ಕಾಲಲ್ಲಿ ಬಲ ಇಲ್ಲದ ಸ್ಥಿತಿಯಾಗಿತ್ತು, ಪಂಚಾಯತದಲ್ಲಿದ್ದ ಎಲ್ಲಾ ಸಿಬ್ಬಂದಿಗಳಿಗೂ ಈ ಅನುಭವ ಆಗಿದೆ. ಸಿಡಿಲು ಬಡಿದಾಗ ದೊಡ್ಡ ಬಾಂಬು ಸಿಡಿದಂತೆ ಶಬ್ದವಾಗಿ ಬೆಂಕಿಯ ಹುಂಡೆ ಕಾಣಿಸಿದೆ. ಪಂಚಾಯತದ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿರಬಹುದು. ಮೆಸ್ಕಾಂನವರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸ ಬಳಿಕವಷ್ಟೇ ಏನಾಗಿದೆ ಎಂದು ತಿಳಿಯಬೇಕಾಗಿದೆ ಎಂದು ಹೇಳಿದ್ದಾರೆ.

Related posts

ಶ್ರೀ.ಧ.ಮಂ.ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಶಿಕ್ಷಣ ಪೂರೈಸಿದ 114 ಮಂದಿಗೆ ಪದವಿ ಪ್ರದಾನ:

Suddi Udaya

ಧರ್ಮಸ್ಥಳ ಬೊಳ್ಮನಾರು ಜನನಿ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಇಂದಬೆಟ್ಟು: ವಿದ್ಯುತ್ ಕಾಮಗಾರಿ ವೇಳೆ ಅವಘಡ: ಕಾರ್ಮಿಕ ಅಕ್ಬರ್ ಅಲಿ ಮೃತ್ಯು

Suddi Udaya

ಉಜಿರೆ ಅನುಗ್ರಹ ಶಾಲೆಯಲ್ಲಿ “ಕಲರ‍್ಸ್ ಡೇ”

Suddi Udaya

ಲಯನ್ ಹೆರಾಲ್ಡ್ ತಾವ್ರೋ ರವರ ಪ್ರಾಂತ್ಯ ಸಮ್ಮೇಳನಕ್ಕೆ : ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಹಾಗೂ ತುಳುನಾಡ ಮಾಣಿಕ್ಯ ನಟ ಅರವಿಂದ ಬೋಳಾರ್

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!