April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಯುರೋಪಿಯನ್ ಫೆಡರೇಶನ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಇ.ಎಫ್.ಎಂ.ಡಿ.) ಸಂಸ್ಥೆಯು ಜಾಗತಿಕ ಮಾನ್ಯತೆ ನೀಡಿ ಗೌರವಿಸಿದೆ.


ಫ್ರಾನ್ಸ್ ದೇಶದ ಲಿಯೋನ್‌ನಲ್ಲಿ ಜೂ.12 ರಂದು ನಡೆದ ವಿಶೇಷ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಐ.ಎಂ.ಡಿ. ನಿರ್ದೇಶಕರಾದ ಡಾ. ಎನ್. ಆರ್. ಪರಶುರಾಮನ್ ಉಪಸ್ಥಿತರಿದ್ದರು.
ಇ.ಎಫ್.ಎಂ.ಡಿ. ಅಧ್ಯಕ್ಷರಾದ ಎರಿಕ್‌ಕೋರ್ನ್‌ವೆಲ್, ನಿರ್ದೇಶಕರುಗಳಾದ ಆಲ್ಫೋನ್ಸ್ ಸಾಕ್ವೆಟ್ ಮತ್ತು ಬರ್ಬರಾ ಸ್ಪೋರ್ನ್ ಹಾಗೂ ಮಾರ್ಗದರ್ಶಕ ಅಧಿಕಾರಿ ನಿಶಿತ್ ಜೈನ್ ಮಾನ್ಯತೆ ನವೀಕರಣ ಪತ್ರ ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.
ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಆಡಳಿತ ನಿರ್ವಹಣೆಯ ಉತ್ಕೃಷ್ಟತೆಯನ್ನು ಮನ್ನಿಸಿ ಸಂಸ್ಥೆಗೆ ಎರಡನೆ ಬಾರಿ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ನೀಡಲಾಗಿದೆ.
ಭಾರತದಲ್ಲೆ ಪ್ರಥಮ ಬಾರಿಗೆ2017ರಲ್ಲಿ ಸಂಸ್ಥೆಗೆ ಜಾಗತಿಕ ಮಾನ್ಯತೆ ದೊರಕಿದ್ದು ಬಳಿಕ 2020 ಮತ್ತು ಇದೀಗ ಎರಡನೆ ಬಾರಿ 2023ರಲ್ಲಿ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ.
ಇದರಿಂದಾಗಿ ಎಸ್.ಡಿ.ಎಂ.ಐ.ಎಂ.ಡಿ. ಜಗತ್ತಿನ ಹದಿನೇಳು ಪ್ರತಿಷ್ಠಿತ ಮೆನೇಜ್‌ಮೆಂಟ್ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳೊಂದಿಗೆ ಅಧ್ಯಯನಕ್ಕಾಗಿ ಸಂಪರ್ಕ ಮತ್ತು ಮಾನ್ಯತೆ ಹೊಂದಿದ್ದು ಅವುಗಳ ಸಹಭಾಗಿತ್ವದಲ್ಲಿ ಜಂಟಿಯಾಗಿ ವಿಶೇಷ ಅಧ್ಯಯನ ಮತ್ತು ಸಂಶೋಧನೆ ನಡೆಸಲು ಮುಕ್ತ ಅವಕಾಶವಿದೆ.
ಪ್ರಸ್ತುತ ಎಸ್.ಡಿ.ಎಂ.ಐ.ಎಂ.ಡಿ.ಯ ೩೨ ವಿದ್ಯಾರ್ಥಿಗಳು ಅಮೇರಿಕಾ, ಮಧ್ಯಪೂರ್ವ ಹಾಗೂ ಯುರೋಪಿಯನ್ ದೇಶಗಳ ವಿಶ್ವವಿದ್ಯಾಲಯಗಳಲಲ್ಲಿ ವಿಶೇಷ ಅಧ್ಯಯನ ಮತ್ತು ಸಂಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ: ಉಜಿರೆ ಶ್ರೀ ಧ. ಮಂ. ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ : ಎಸ್.ಡಿ.ಎಂ. ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ

Suddi Udaya

ಮಾಜಿ ಸಚಿವ ಗಂಗಾಧರ ಗೌಡ ಮನೆಗೆ ಹಾಗೂ ಕಾಲೇಜಿಗೆ ಐಟಿ ಅಧಿಕಾರಿಗಳ ದಾಳಿ

Suddi Udaya

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆಯ ಕಲ್ಲೆಯಲ್ಲಿ ಹಾಡುಗಲೇ ಲಕ್ಷಾಂತರ ಮೌಲ್ಯದ ನಗದು ಸಹಿತ ಚಿನ್ನಾಭರಣ ಕಳವು ಪ್ರಕರಣ: ಮೈಸೂರು ಜಿಲ್ಲೆಯ ಝೂ ಪಾರ್ಕ್‌ನಲ್ಲಿ ಆರೋಪಿಯನ್ನು ಸೆರೆ ಹಿಡಿದ ಪೊಲೀಸರು: ಮೈಸೂರು ಗೋಲ್ಡ್ ಕಂಪನಿಯಲ್ಲಿ ಮಾರಾಟ ಮಾಡಿದ್ದ ಚಿನ್ನಭರಣ ವಶ: ಬೆಳ್ತಂಗಡಿ ಪೊಲೀಸರ ಯಶಸ್ವಿ ಕಾರ್ಯಾಚರಣೆ

Suddi Udaya
error: Content is protected !!