25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮೈಸೂರಿನ ಎಸ್.ಡಿ.ಎಂ.ಐ.ಎಂ.ಡಿ.ಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಇ.ಎಫ್.ಎಂ.ಡಿ. ಮಾನ್ಯತೆ ನವೀಕರಣ: ಡಾ| ಡಿ. ಹೆಗ್ಗಡೆಯವರಿಂದ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ಸ್ವೀಕಾರ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಆಡಳಿತದಲ್ಲಿ ಮೈಸೂರಿನಲ್ಲಿ ನಡೆಸಲ್ಪಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇನ್‌ಸ್ಟಿಟ್ಯೂಟ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಎಸ್.ಡಿ.ಎಂ.ಐ.ಎಂ.ಡಿ.) ಸಂಸ್ಥೆಯ ಪಿ.ಜಿ.ಡಿ.ಎಂ. ಕೋರ್ಸಿಗೆ ಎರಡನೆ ಬಾರಿ ಯುರೋಪಿಯನ್ ಫೆಡರೇಶನ್ ಆಫ್ ಮೆನೇಜ್‌ಮೆಂಟ್ ಡೆವೆಲಪ್‌ಮೆಂಟ್ (ಇ.ಎಫ್.ಎಂ.ಡಿ.) ಸಂಸ್ಥೆಯು ಜಾಗತಿಕ ಮಾನ್ಯತೆ ನೀಡಿ ಗೌರವಿಸಿದೆ.


ಫ್ರಾನ್ಸ್ ದೇಶದ ಲಿಯೋನ್‌ನಲ್ಲಿ ಜೂ.12 ರಂದು ನಡೆದ ವಿಶೇಷ ಸಮಾರಂಭದಲ್ಲಿ ಸಂಸ್ಥೆಯ ಆಡಳಿತ ಮಂಡಳಿ ಅಧ್ಯಕ್ಷರಾದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಆಡಳಿತ ಮಂಡಳಿ ಉಪಾಧ್ಯಕ್ಷ ಡಿ. ಸುರೇಂದ್ರ ಕುಮಾರ್ ಮತ್ತು ಎಸ್.ಡಿ.ಎಂ. ಐ.ಎಂ.ಡಿ. ನಿರ್ದೇಶಕರಾದ ಡಾ. ಎನ್. ಆರ್. ಪರಶುರಾಮನ್ ಉಪಸ್ಥಿತರಿದ್ದರು.
ಇ.ಎಫ್.ಎಂ.ಡಿ. ಅಧ್ಯಕ್ಷರಾದ ಎರಿಕ್‌ಕೋರ್ನ್‌ವೆಲ್, ನಿರ್ದೇಶಕರುಗಳಾದ ಆಲ್ಫೋನ್ಸ್ ಸಾಕ್ವೆಟ್ ಮತ್ತು ಬರ್ಬರಾ ಸ್ಪೋರ್ನ್ ಹಾಗೂ ಮಾರ್ಗದರ್ಶಕ ಅಧಿಕಾರಿ ನಿಶಿತ್ ಜೈನ್ ಮಾನ್ಯತೆ ನವೀಕರಣ ಪತ್ರ ನೀಡಿ ಹೆಗ್ಗಡೆಯವರನ್ನು ಗೌರವಿಸಿದರು.
ಜಾಗತಿಕ ಮಟ್ಟದಲ್ಲಿ ಸಂಸ್ಥೆಯ ಆಡಳಿತ ನಿರ್ವಹಣೆಯ ಉತ್ಕೃಷ್ಟತೆಯನ್ನು ಮನ್ನಿಸಿ ಸಂಸ್ಥೆಗೆ ಎರಡನೆ ಬಾರಿ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ನೀಡಲಾಗಿದೆ.
ಭಾರತದಲ್ಲೆ ಪ್ರಥಮ ಬಾರಿಗೆ2017ರಲ್ಲಿ ಸಂಸ್ಥೆಗೆ ಜಾಗತಿಕ ಮಾನ್ಯತೆ ದೊರಕಿದ್ದು ಬಳಿಕ 2020 ಮತ್ತು ಇದೀಗ ಎರಡನೆ ಬಾರಿ 2023ರಲ್ಲಿ ಜಾಗತಿಕ ಮಾನ್ಯತೆ ನವೀಕರಣ ಪ್ರಮಾಣಪತ್ರ ನೀಡಿ ಗೌರವಿಸಲಾಗಿದೆ.
ಇದರಿಂದಾಗಿ ಎಸ್.ಡಿ.ಎಂ.ಐ.ಎಂ.ಡಿ. ಜಗತ್ತಿನ ಹದಿನೇಳು ಪ್ರತಿಷ್ಠಿತ ಮೆನೇಜ್‌ಮೆಂಟ್ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳೊಂದಿಗೆ ಅಧ್ಯಯನಕ್ಕಾಗಿ ಸಂಪರ್ಕ ಮತ್ತು ಮಾನ್ಯತೆ ಹೊಂದಿದ್ದು ಅವುಗಳ ಸಹಭಾಗಿತ್ವದಲ್ಲಿ ಜಂಟಿಯಾಗಿ ವಿಶೇಷ ಅಧ್ಯಯನ ಮತ್ತು ಸಂಶೋಧನೆ ನಡೆಸಲು ಮುಕ್ತ ಅವಕಾಶವಿದೆ.
ಪ್ರಸ್ತುತ ಎಸ್.ಡಿ.ಎಂ.ಐ.ಎಂ.ಡಿ.ಯ ೩೨ ವಿದ್ಯಾರ್ಥಿಗಳು ಅಮೇರಿಕಾ, ಮಧ್ಯಪೂರ್ವ ಹಾಗೂ ಯುರೋಪಿಯನ್ ದೇಶಗಳ ವಿಶ್ವವಿದ್ಯಾಲಯಗಳಲಲ್ಲಿ ವಿಶೇಷ ಅಧ್ಯಯನ ಮತ್ತು ಸಂಶೋಧನಾ ಕಾರ್ಯದಲ್ಲಿ ನಿರತರಾಗಿದ್ದಾರೆ.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಗಳಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕೊಕ್ಕಡ ಗ್ರಾ.ಪಂ. ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಕೊಕ್ಕಡ: ಪಲಸ್ತಡ್ಕ ರಕ್ಷಿತಾರಣ್ಯದಿಂದ ಮರ ಕಳವು ಭೇದಿಸಿದ ಅರಣ್ಯ ಇಲಾಖೆ: ಬಂಧಿಸಲಾಗಿದ್ದ ಆರೋಪಿ ಪ್ರಕಾಶ್ ಜಾಮೀನು ಮೇಲೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲ್ಲೂಕಿನ ವಿವಿಧ ಚಚ್೯ಗಳಿಗೆ ಭೇಟಿ ನೀಡಿ, ಮತ ಯಾಚಿಸಿದ ಹರೀಶ್ ಪೂಂಜ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಸೌತಡ್ಕ ದೇವಸ್ಥಾನದ ಆಸ್ತಿ ಉಳಿಸಲು ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

Suddi Udaya
error: Content is protected !!