27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ರಕ್ಷಣೆಗಾಗಿ ವ್ಯವಸ್ಥಾಪನಾ ಸಮಿತಿಯವರು ಕಳೆದ ಒಂದು ವರ್ಷದ ಹಿಂದೆ ಹಾಕಿದ್ದ ಗೇಟನ್ನು ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ದ.ಕ ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರರ ಉಪಸ್ಥಿತಿಯಲ್ಲಿ ಜೂ.13ರಂದು ತೆರವುಗೊಳಿಸಲಾಯಿತು.


ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆ 2015 ರಲ್ಲಿ ದೇವಸ್ಥಾನಗಳಿಗೆ ಭದ್ರತೆ ಒದಗಿಸುವಂತೆ ಸುತ್ತೋಲೆ ಹೊರಡಿಸಿತ್ತು.ಈ ಆದೇಶದ ಹಿನ್ನಲೆಯಲ್ಲಿ ಸರಕಾರದಿಂದ ಎಲ್ಲಾ ರೀತಿಯ ಮಾಹಿತಿಯನ್ನು ಪಡೆದು ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಬಯಲು ಆಲಯವಾಗಿರುವುದರಿಂದ ದೇವಸ್ಥಾನದಲ್ಲಿ ಹೊರಗೆ ಇರುವ ಗಂಟೆ ಸೇರಿದಂತೆ ಲಕ್ಷಾಂತರ ಬೆಲೆಬಾಳುವ ಸೊತ್ತುಗಳ ರಕ್ಷಣೆ, ಹುಂಡಿಯ ರಕ್ಷಣೆ ಸೇರಿದಂತೆ ದೇವಸ್ಥಾನದ ಸಮಗ್ರ ಹಿತದೃಷ್ಟಿಯಿಂದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ಚಿಂತನೆ ನಡೆಸಿ ದೇವಸ್ಥಾನದ ಹಿಂಭಾಗದಲ್ಲಿ ಕೊಕ್ಕಡ ಗ್ರಾಮದ ಸ.ನಂ 167/1ರಲ್ಲಿ ಅನ್ನಛತ್ರದ ಬಳಿ ರಸ್ತೆಗೆ ಕಳೆದ ವರ್ಷ ಎ.24ರಂದು ಗೇಟು ಹಾಕಿ ಭದ್ರತೆ ಮಾಡಿದ್ದರು. ದೇವಸ್ಥಾನದ ಎದುರು ಭಾಗದಿಂದ ರಸ್ತೆ ಇರುವುದರಿಂದ ಸಮಿತಿ ಈ ತೀರ್ಮಾನವನ್ನು ತೆಗೆದುಕೊಂಡಿತ್ತು.


ಆದರೆ ರಸ್ತೆಗೆ ದೇವಸ್ಥಾನದ ವತಿಯಿಂದ ಗೇಟು ಅಳವಡಿಸಿರುವುದನ್ನು ಶ್ರೀ ಕೃಷ್ಣ ಭಟ್ ಸೇರಿದಂತೆ ಇತರರು ಆಕ್ಷೇಪ ವ್ಯಕ್ತಪಡಿಸಿ, ದ.ಕ ಜಿಲ್ಲಾಧಿಕಾರಿಗಳು ಮತ್ತು ಪುತ್ತೂರು ಸಹಾಯಕ ಆಯುಕ್ತರಿಗೆ ಮನವಿ ಮಾಡಿ, ಗೇಟು ಹಾಕಿರುವುದರಿಂದ ಸಾರ್ವಜನಿಕರಿಗೆ ಆಗಿರುವ ಸಮಸ್ಯೆ ಬಗ್ಗೆ ತಿಳಿಸಿದ್ದರು.
ಅರ್ಜಿಯ ಪರಿಶೀಲನೆ ನಡೆಸಿದ ದ.ಕ ಜಿಲ್ಲಾಧಿಕಾರಿಗಳು ಸರಕಾರಿ ಸ್ಥಳದ ಮೂಲಕ ಸುಮಾರು 50 ವರ್ಷಗಳಿಂದ ಇದ್ದ ರಸ್ತೆಗೆ ಹಾಕಿದ ಗೇಟನ್ನು ಪರಿಶೀಲಿಸಿ, ತೆರವುಗೊಳಿಸಿ ಸಾರ್ವಜನಿಕರ ಬಳಕೆಗೆ ಅನುವು ಮಾಡಿಕೊಡುವಂತೆ ತಹಶೀಲ್ದಾರ್‌ರಿಗೆ ಸೂಚನೆ ನೀಡಿದ್ದರು.
ಜಿಲ್ಲಾಧಿಕಾರಿಗಳ ಸೂಚನೆಯಂತೆ ತಹಶೀಲ್ದಾರ್ ಸುರೇಶ್ ಕುಮಾರ್, ಕಂದಾಯ ನಿರೀಕ್ಷಕ ಪವಾಡಪ್ಪ ದೊಡ್ಡಮನಿ ಹಾಗೂ ಗ್ರಾಮ ಕರಣಿಕರು ಉಪಸ್ಥಿತಿಯಲ್ಲಿ ರಸ್ತೆಗೆ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಯಿತು.

Related posts

ಶಿರ್ತಾಡಿ : ಕಾರು ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ: ಆಕ್ಟಿವಾ ಸವಾರೆ, ಶಿಕ್ಷಕಿ ಮೃತ್ಯು

Suddi Udaya

ಉಜಿರೆ: ಶ್ರೀ. ಧ.ಮಂ.ಆಂಗ್ಲ ಮಾಧ್ಯಮ ಶಾಲಾ ಪ್ರಾರಂಭೋತ್ಸವದ ಸಂಭ್ರಮ -ಮಕ್ಕಳಿಗೆ ಅದ್ದೂರಿಯ ಸ್ವಾಗತ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya

ಉಜಿರೆ: ರುಡ್ ಸೆಟ್‌ನಲ್ಲಿ ವಿದ್ಯುತ್ ಉಪಕರಣ ಹಾಗೂ ದ್ವಿಚಕ್ರ ವಾಹನ ರಿಪೇರಿ ತರಬೇತಿ ಸಮಾರೋಪ

Suddi Udaya
error: Content is protected !!