July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಳ್ಳಾರಿ ಜನಾರ್ದನ ರೆಡ್ಡಿ ಭೇಟಿ

ಬೆಳ್ತಂಗಡಿ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸ್ಥಾಪಕರಾದ ಬಳ್ಳಾರಿಯ ಜನಾರ್ದನ ರೆಡ್ಡಿ ಹಾಗೂ ಕುಟುಂಬ ಜೂ. 13 ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಜನಾರ್ದನ ರೆಡ್ಡಿ ಅವರ ಪತ್ನಿ ಶ್ರೀಮತಿ ಅರುಣಾ ಲಕ್ಷ್ಮೀ, ಮಗಳು ಬ್ರಹ್ಮಣಿ ರೆಡ್ಡಿ, ಆಳಿಯ ರಾಜೀವ್ ಹಾಗೂ ಅವರ ಕುಟುಂಬದವರು ಜೂನ್ ೧೨ ರಾತ್ರಿ ಧರ್ಮಸ್ಥಳ ಸನ್ನಿಧಿಯ ವಸತಿ ಗೃಹಕ್ಕೆ ಆಗಮಿಸಿದ್ದರು. ಜೂ.೧೩ರಂದು ಬೆಳಗ್ಗೆ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಸರ್ವ ಸೇವೆ ಪೂಜೆ ಸಲಿಸಿದರು.
ಬಳಿಕ ಮಾಧ್ಯಮ ಜೊತೆ ಮಾತನಾಡಿದ ಅವರು ಕಳೆದ 6 ವರ್ಷಗಳಿಂದ ಮಂಜುನಾಥನ ದರ್ಶನ ಮಾಡಲು ಸಾಧ್ಯವಾಗಿಲ್ಲ. ಇಂದು ದರ್ಶನ ಪಡೆದಿದ್ದೇನೆ. ನಿನ್ನೆ ಸಿಬಿಐ ವಿಶೇಷ ಕೋರ್ಟ್ ಪ್ರಕರಣ ಸಂಬಂಧ ಆಸ್ತಿ ಪಾಸ್ತಿ ಮಾರಾಟ ಮಾಡದಂತೆ ಕೋರ್ಟ್ ಆದೇಶ ಮಾಡಿದೆ. ಧರ್ಮಸ್ಥಳ ಮಂಜುನಾಥ ಧರ್ಮ ಮತ್ತು ನ್ಯಾಯವನ್ನು ಕೊಡುತ್ತಾನೆ. ಅವನು ದೇವರಾಗಿರುವ ಕಾರಣ ಅವನಿಂದ ಯಾವತ್ತು ನ್ಯಾಯನೇ ಸಿಗುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

Related posts

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕಮಂಡಲದ ವತಿಯಿಂದ ಶ್ರಮದಾನ

Suddi Udaya

ಬೆಳ್ತಂಗಡಿ: ಪಿ. ಎಂ. ಶ್ರೀ ಸರಕಾರಿ ಮಾದರಿ ಹಿ.ಪ್ರಾ. ಶಾಲೆಯಲ್ಲಿ ಸ್ವಚ್ಛತಾ ಪಕ್ವಾಡದ ಜಾಗೃತಿ ಜಾಥಾ ಮತ್ತು ಮಾಹಿತಿ ಕಾರ್ಯಾಗಾರ

Suddi Udaya

ಪುದುವೆಟ್ಟು ಶಾಲೆಯಲ್ಲಿ ವಿಜ್ಞಾನ ಮಾದರಿಗಳ ತಯಾರಿಕಾ ಕಾರ್ಯಗಾರ

Suddi Udaya

ಕ್ಯಾಂಪ್ಕೊ “ಸಾಂತ್ವನ” ಯೋಜನೆಯಡಿ ಚಿಕಿತ್ಸಾ ನೆರವು

Suddi Udaya

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya

ವೇಣೂರು ಸ.ಪ.ಪೂ.ಕಾಲೇಜು ಪ್ರೌಢಶಾಲಾ ವಿಭಾಗದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಉಪಾಧ್ಯಕ್ಷರಾಗಿ ರಾಜೇಶ್ ಪೂಜಾರಿ ಆಯ್ಕೆ

Suddi Udaya
error: Content is protected !!