September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಉಜಿರೆ: ಶ್ರೀ ಧ. ಮಂ. ಆಂ. ಮಾ. ಶಾಲೆಯಲ್ಲಿ ಯೋಗ ಉದ್ಘಾಟನಾ ಕಾರ್ಯಕ್ರಮ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ಇಂದು ಯೋಗ ಉದ್ಘಾಟನಾ ಕಾರ್ಯಕ್ರಮನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ನ್ಯಾಚುರೋಪತಿ ಸಂಸ್ಥೆಯ ಉಪ ಪ್ರಾಂಶುಪಾಲರಾದ ಶಿವಪ್ರಸಾದ್ ಶೆಟ್ಟಿ ಅವರು ದೀಪ ಬೆಳಗಿಸುವುದರ ಮೂಲಕ ನಡೆಸಿಕೊಟ್ಟು ಯೋಗದ ಮಹತ್ವವನ್ನು ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ತಿಳಿಯಪಡಿಸಿದರು.

ಯೋಗ ಮಾಡಿ ಸುಯೋಗಿಗಳಾಗಬಹುದು. ಯೋಗವು ಮಾನವನ ದೇಹದ ದೈಹಿಕ ಮಾನಸಿಕ ಮತ್ತು ಆಧ್ಯಾತ್ಮಿಕ ಸ್ಥಿತಿಯನ್ನು ಉನ್ನತ ಹಂತಕೆ ಕೊಂಡೊಯ್ಯುತ್ತದೆ ಎಂದು ನುಡಿದರು. ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ವಿದ್ಯಾಲಕ್ಷ್ಮಿ, ಯೋಗ ತರಬೇತುಗಾರರಾದ ಮಾನ್ಯ ಆತ್ಮಿಕ ಮತ್ತು ಸಚಿ ಹಾಗೂ ಶಾಲಾ ಯೋಗ ತರಬೇತಿ ವಿದ್ಯಾರ್ಥಿಗಳೆಲ್ಲಾ ಭಾಗವಹಿಸಿದ್ದರು.

10ನೇ ತರಗತಿಯ ವಿದ್ಯಾರ್ಥಿನಿಯಾದ ಶರದಿ ಸ್ವಾಗತಿಸಿ, ಪೂಜಾ ವಂದನಾರ್ಪಣೆಯನ್ನು ಮಾಡಿದರು.

ಈ ಕಾರ್ಯಕ್ರಮದ ಸಂಯೋಜನೆಯನ್ನು ಶಾಲಾ ದೈಹಿಕಶಿಕ್ಷಕರಾದ ಸುಭಾಷ್ ಮಾಡಿದರು.

Related posts

ಬಜಿರೆ: ಹೊಸಪಟ್ಣ ಪರಿಸರದಲ್ಲಿ ಚಿರತೆ ಓಡಾಟ-ಜನರಲ್ಲಿ ಆತಂಕ: ಬೋನ್ ಅಳವಡಿಸಲು ಗ್ರಾಮಸ್ಥರ ಆಗ್ರಹ

Suddi Udaya

ಆರಂಬೋಡಿಯಲ್ಲಿ ಹಿಂದೂ ಜಾಗರಣ ವೇದಿಕೆಯಿಂದ 41ನೇ ವರ್ಷದ ಮೊಸರು ಕುಡಿಕೆ ಉತ್ಸವಕ್ಕೆ ಸಿದ್ಧತೆ: ಅಧ್ಯಕ್ಷರಾಗಿ ಸಂಘಟಕ ಪ್ರಣೀತ್ ಹಿಂಗಾನಿ ಆಯ್ಕೆ

Suddi Udaya

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಚುನಾವಣೆಯಲ್ಲಿ ಅಭೂತ ಪೂರ್ವ ವಿಜಯಕ್ಕಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಹಾಗೂ ನೂತನ ನಿದೇ೯ಶಕರುಗಳಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಬಸ್ ನಲ್ಲಿ ಮೊಬೈಲ್ ಕಳ್ಳತನ

Suddi Udaya

ಮಲಮಂತಿಗೆ: ಕೃಷಿಕ ಶೇಖರ್ ಗೌಡ ನಿಧನ

Suddi Udaya

ಗೇರುಕಟ್ಟೆ : ಕಳಿಯ ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!