23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ. ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಕುಕ್ಕುಜೆ ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಕೂತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮನಾಜಿ ಯವರು ಸ್ವಾಗತಿಸಿದರು, ಶ್ರೀಮತಿ ಶಿಲ್ಪಾರವರು ಧನ್ಯವಾದವಿತ್ತರು. ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಜು.13: ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ಧೇಶ ಸಹಕಾರ ಸಂಘದ ಶ್ರೀ ಗುರು ಸಾನಿಧ್ಯ ವಾಣಿಜ್ಯ ಸಂಕೀರ್ಣದ ಲೋಕಾರ್ಪಣೆ

Suddi Udaya

ಬಳಂಜ ಸ.ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಉಜಿರೆ : ಅನುಗ್ರಹ ಕಾಲೇಜಿನಲ್ಲಿ ಸಾಹಿತ್ಯ ಹಾಗೂ ವ್ಯಕ್ತಿತ್ವ ವಿಕಸನ

Suddi Udaya

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya

ತಾಲೂಕಿನ ಹಲವು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಸ್ಕೂಲ್ಆಗಿ ಉನ್ನತೀಕರಿಸುವಂತೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
error: Content is protected !!