September 6, 2026
Uncategorizedಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿಯ  ಚರಂಡಿ ದುರಸ್ತಿ           

ಉಜಿರೆ: ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ರಸ್ತೆಯ ಕಲ್ಮಂಜ ಗ್ರಾಮದ ನಿಡಿಗಲ್ ಪರಿಸರದಲ್ಲಿ ಗ್ರಾಮ ಪಂಚಾಯಿತಿ ವತಿಯಿಂದ ರಸ್ತೆ ಬದಿಯ ಚರಂಡಿಗಳನ್ನು ಸ್ವಚ್ಛಗೊಳಿಸಲಾಯಿತು. ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಹೆದ್ದಾರಿಯ ಮೋರಿಗಳಲ್ಲಿ ತುಂಬಿದ್ದ ತ್ಯಾಜ್ಯವನ್ನು ತೆರವುಗೊಳಿಸಿ, ಅಗತ್ಯ ಸ್ಥಳಗಳಲ್ಲಿ ಚರಂಡಿ ನಿರ್ಮಿಸಿ ಮಳೆ ನೀರು ಸರಾಗವಾಗಿ ಹರಿಯಲು ವ್ಯವಸ್ಥೆ ಮಾಡಲಾಯಿತು.
ಇಲ್ಲಿನ ಕೆಲವು ಪ್ರದೇಶಗಳಲ್ಲಿ ರಸ್ತೆ ಚರಂಡಿಯ ಮೋರಿಗಳು ಕಸಕಡ್ಡಿ, ತ್ಯಾಜ್ಯಗಳಿಂದ ಬ್ಲಾಕ್ ಆಗಿ ಮಳೆ ನೀರು ರಸ್ತೆಯುದ್ದಕ್ಕೂ ಹರಿಯುತ್ತಿತ್ತು. ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಬರುವ ಪಂಚಾಯಿತಿಗಳು ತಮ್ಮ ವ್ಯಾಪ್ತಿಯಲ್ಲಿ ಇಂತಹ ಪ್ರಾಥಮಿಕ ಕೆಲಸಗಳನ್ನು ನಡೆಸಿದರೆ ರಸ್ತೆಯಲ್ಲಿ ಮಳೆ ನೀರು ಹರಿದು ವಾಹನ ಸಂಚಾರಕ್ಕೆ ಆತಂಕಕಾರಿಯಾಗುವ  ಸಂಭವ ಕಡಿಮೆಯಾಗಬಹುದು.

Related posts

ಎಸ್.ಡಿ.ಎಂ ಪಾಲಿಟೆಕ್ನಿಕ್: ಪ್ರಾರಂಭೋತ್ಸವ ಸಮಾರಂಭ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಉದ್ಯಮಿ ಸತೀಶ್ ಪೂಜಾರಿ ಬೆಳಪು ಮತ್ತು ಪ್ರಭಾಕರ ಸುವರ್ಣ ಕರ್ನಿರೆ ಭೇಟಿ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಮೇಲಂತಬೆಟ್ಟು ಕಬ್ಬಿನಹಿತ್ತಿಲು ನಿವಾಸಿ ಪಿ. ವೆಂಕಟರಮಣ ಭಟ್ ನಿಧನ

Suddi Udaya

ತಾಲೂಕು ಮಟ್ಟದ ಸ್ಪರ್ಧೆ: ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ಗೆ ಸಮಗ್ರ ಪ್ರಶಸ್ತಿ

Suddi Udaya
error: Content is protected !!