23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಬಳಂಜ: 38 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಅಧ್ಯಕ್ಷರಾಗಿ ಗುರುಪ್ರಸಾದ್ ಹೆಗ್ಡೆ,ಪ್ರ.ಕಾರ್ಯದರ್ಶಿಯಾಗಿ ಯಶೋಧರ ಶೆಟ್ಟಿ ಆಯ್ಕೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಜೆಡಿಎಸ್ ಪಕ್ಷದ ಪ್ರಭಾವಿ ನಾಯಕ ಹೆಚ್.ಡಿ ರೇವಣ್ಣ ಅಳದಂಗಡಿ ಸತ್ಯದೇವತಾ ಕ್ಷೇತ್ರಕ್ಕೆ ಭೇಟಿ

Suddi Udaya

ಉಚ್ಚಿಲದಲ್ಲಿ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ಮಾಲಾಡಿ ನಿವಾಸಿ ರಮೇಶ್ ಹೆಗ್ಡೆ ಮೃತ್ಯು

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅಭಿನಂದನೆ

Suddi Udaya
error: Content is protected !!