23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಸಭೆಯನ್ನು ಇತ್ತೀಚೆಗೆ ಮಡಂತ್ಯಾರು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸೇವಾಪ್ರತಿನಿಧಿಯಾಗಿರುವ ಶ್ರೀಮತಿ ಹರಿಣಿ ಇವರ ಸ್ವಾಗತದೊಂದಿಗೆ ಸಭೆಯು ನಡೆಯಿತು.

ಯೋಜನಾ ಮೇಲ್ವಿಚಾರಕ ವಸಂತ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಭಜನಾ ಮಂಡಳಿಗಳ ಸರಕಾರದ ನಿಯಮಾನುಸಾರ ನೊಂದಾವಣಿಯ ಬಗ್ಗೆ ಭಜನಾ ಮಂಡಳಿಗಳ ಜಾಗದ ರೆಕಾರ್ಡಿನ ಬಗ್ಗೆ ಹಾಗೂ ಮಂಡಳಿಗಳಿಗೆ ಈಗ ಇರುವ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆ ಮತ್ತು ಅಂತಹ ಸಮಸ್ಯೆಗಳಿಗೆ ಹುಡುಕಿಕೊಳ್ಳಬೇಕಾದ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು.

ನಮ್ಮ ಸನಾತನ ಧರ್ಮ ಸಂಸ್ಕೃತಿಯನ್ನು ಉಳಿಸಿ ಅದನ್ನು ಬಲವರ್ಧನೆಗೊಳಿಸಲು ನಮ್ಮ ಭಜಕ ಸಹೋದರರೊಂದಿಗೆ ಸಹೋದರಿಯರು ಮತ್ತು ಮಾತೆಯರು ಕೈಜೋಡಿಸಬೇಕು ಹಾಗೂ ನಮ್ಮ ಮಕ್ಕಳಿಗೆ ಧರ್ಮ ಜಾಗೃತಿಯೊಂದಿಗೆ ಗುರು ಹಿರಿಯರಿಗೆ ಗೌರವ ನೀಡುವುದನ್ನು ಮನೆಯಲ್ಲಿ ಹೇಳಿಕೊಡಬೇಕು ಎಂದರು. ನಂತರ ಭಜನಾ ‌ತಂಡಗಳ ಪದಾಧಿಕಾರಿಗಳು ಆಯಾ ತಂಡದ ಕೆಲವೊಂದು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸೇವಾ ಪ್ರತಿನಿಧಿಯವರ ವಂದನಾರ್ಪಣೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

ಸಭೆಯಲ್ಲಿ ಮಡಂತ್ಯಾರು ವಲಯ ಸಂಯೋಜಕರಾದ ಪ್ರವೀಣ್ ಹೆಗ್ಡೆ ಮಡಂತ್ಯಾರು ಹಾಗೂ ಪಣಕಜೆ, ಸೊಣಂದೂರು, ಪಾರೆಂಕಿ, ಪುರಿಯ ಮತ್ತು ಮಂಜಲಪಲ್ಕೆ ಭಜನಾ ತಂಡಗಳ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ: ರೂ. 2. 43 ಲಕ್ಷ ನಿವ್ವಳ ಲಾಭ.

Suddi Udaya

ನಾರಾವಿ ವಲಯ ಶ್ರೀ ಕ್ಷೇ.ಧ. ಗ್ರಾ. ಯೋಜನೆಯಿಂದ ಜನಮಂಗಲ ಕಾರ್ಯಕ್ರಮದಡಿ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಆ.15-16: ಗುರುವಾಯನಕೆರೆ ಎಕ್ಸೆಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ರಕ್ಷಕ ನಮನ 2025, ಶೈಕ್ಷಣಿಕ ಸಾಧಕರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿವೇತನ ವಿತರಣೆ

Suddi Udaya

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ, ಉಜಿರೆ ಉದ್ಯಮಿ ಮೋಹನ್ ಕುಮಾರ್ ರವರಿಂದ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಭಾಗವಹಿಸುವ ಬಂದಾರು ಶಾಲೆ ವಿದ್ಯಾರ್ಥಿಗಳಿಗೆ ಶುಭಹಾರೈಕೆ: ಮುಂಡತ್ತೋಡಿ ಶಾಲಾ 51 ವಿದ್ಯಾರ್ಥಿಗಳಿಗೆ ಕಲಿಕಾ ಸಾಮಾಗ್ರಿ ವಿತರಣೆ

Suddi Udaya

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya
error: Content is protected !!