22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಿಕ್ಷಣ ಸಂಸ್ಥೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕುತ್ಲೂರು ಸರಕಾರಿ ಉನ್ನತೀಕರಿಸಿದ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣಾ ಸಮಾರಂಭವು ನಡೆಯಿತು.

ಮುರಳಿ ಬಿ ನೋಟರಿ ವಕೀಲರು ಬೆಳ್ತಂಗಡಿ ಇವರು ಬರೆಯುವ ಪುಸ್ತಕ ವಿತರಣೆ ಮಾಡಿ ಸರಕಾರಿ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ದೇಶದ ಉನ್ನತ ಹುದ್ದೆಯನ್ನು ಅಲಂಕರಿಸಿರುತ್ತಾರೆ. ನಮ್ಮ ಈ ಶಾಲೆಯ ವಿದ್ಯಾರ್ಥಿಗಳು ಉನ್ನತ ವ್ಯಾಸಂಗ ಮಾಡಿ ದೇಶದ ಉತ್ತಮ ಪ್ರಜೆಗಳಾಗಬೇಕೆಂದು ಶುಭ ಹಾರೈಸಿದರು.

ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಾಮಚಂದ್ರ ಭಟ್ ಕುಕ್ಕುಜೆ ಪುಸ್ತಕ ವಿತರಣೆ ಮಾಡಿದ ವಕೀಲರನ್ನು ಅಭಿನಂದಿಸಿದರು. ವೇದಿಕೆಯಲ್ಲಿ ಕೂತ್ಲೂರು ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಪಡಿವಾಳ್, ಶಾಲಾ ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಜ್ಯೋತಿ ಶಿವಣ್ಣ ಶೆಟ್ಟಿ, ಗ್ರಾಮ ಪಂಚಾಯಿತಿ ಸದಸ್ಯರಾದ ಸಂತೋಷ್, ಮತ್ತು ಪ್ರೇಮ, ವಕೀಲರ ಧರ್ಮಪತ್ನಿ ಮನೋರಮ ಭಟ್, ಮಕ್ಕಳಾದ ಮಯೂರ ಮತ್ತು ಮಂದಾರ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಸುಮನಾಜಿ ಯವರು ಸ್ವಾಗತಿಸಿದರು, ಶ್ರೀಮತಿ ಶಿಲ್ಪಾರವರು ಧನ್ಯವಾದವಿತ್ತರು. ಶಾಲಾ ಮಕ್ಕಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

Related posts

ಲೋಕೋಪಯೋಗಿ ಸಚಿವರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya

ಉಜಿರೆ: ಯಕ್ಷಭಾರತಿಯಿಂದ ಸಂಸ್ಕಾರ ಶಿಕ್ಷಣ ಶಿಬಿರ

Suddi Udaya

ಆರೋಗ್ಯ ಸಚಿವ ಯು.ಟಿ. ಖಾದರ್ ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ

Suddi Udaya

ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ “ಫೌಂಡೇಶನ್ ಎಡ್ಜ್” ವಿನೂತನ ಕಾರ‍್ಯಕ್ರಮಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಅರ್ಸುಲೈನ್ ಧರ್ಮಭಗಿನಿ ಸಿ. ಎಮಿಲ್ಡಾ ಕ್ರಾಸ್ತಾ ನಿಧನ

Suddi Udaya
error: Content is protected !!