24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಪಣಕಜೆ : ಚರಂಡಿಗೆ ವಾಲಿದ ಕೆಎಸ್ಆರ್ ಟಿಸಿ ಬಸ್ಸು

Suddi Udaya

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಟಿ.ವಿ. ಟೆಕ್ನಿಷಿಯನ್‌ ತರಬೇತಿ ಮತ್ತು ಸಿ.ಸಿ. ಟಿವಿ ಕ್ಯಾಮರ ತರಬೇತಿಯ ಸಮಾರೋಪ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವರ್ಷವೊಂದರಲ್ಲೇ 193 ಕೆರೆಗಳ ಪುನಶ್ಚೇತನ : ಬರಗೆಲ್ಲುವುದಕ್ಕೆ ಕೆರೆ ಮಾದರಿ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

Suddi Udaya
error: Content is protected !!