23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಇಂದಬೆಟ್ಟು : ಬೃಹತ್ ಗಾತ್ರದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ

Suddi Udaya

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢ ಶಾಲೆಯಲ್ಲಿ ತಾಲೂಕು ಮಟ್ಟದ ಕರಾಟೆ ಸ್ಪರ್ಧೆ

Suddi Udaya

ಲಾಯಿಲ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಓಡದಕರಿಯದಲ್ಲಿ ನವರಾತ್ರಿ ಉತ್ಸವ

Suddi Udaya
error: Content is protected !!