22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ಮಧ್ಯಾಂತರ ಸಮ್ಮೇಳನದಲ್ಲಿ ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ‘ಎಕ್ಸೆಲೆನ್ಸ್ ಅವಾರ್ಡ್’ ಹಾಗೂ ‘ಗೋಲ್ಡನ್ ಸ್ಟಾರ್ ಪ್ರೆಸಿಡೆಂಟ್’ ಪ್ರಶಸ್ತಿ

Suddi Udaya

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ನಾರಾವಿ: ಹಿರ್ತೋಟ್ಟು ಮೀನಗುಂಡಿಗೆ ವಿಷ: ಅಪಾರ ಪ್ರಮಾಣದ ಮೀನುಗಳ ಸಾವು

Suddi Udaya

ಮುಂಡಾಜೆ ಪ.ಪೂ. ಕಾಲೇಜು ಪ್ರಾರಂಭೋತ್ಸವ

Suddi Udaya

ಸವಣಾಲು ಶ್ರೀ ಪಿಲಿಚಾಮುಂಡಿ ಕೊಡಮಣಿತ್ತಾಯಿ ನೂತನ ದೈವಸ್ಥಾನದ ನಿರ್ಮಾಣಕ್ಕೆ ಶ್ರೀ ಕೊಡಮಣಿತ್ತಾಯ ಯಂಗ್ ಚಾಲೆಂಜರ್ಸ್ ಸಮಿತಿಯಿಂದ ದೇಣಿಗೆ ಹಸ್ತಾಂತರ

Suddi Udaya
error: Content is protected !!