September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಪುತ್ತೂರು ಗೇರು ಸಂಶೋಧನ ಕೇಂದ್ರದ ಎರಡು ತಳಿ ಪ್ರಧಾನಿಯಿಂದ ಬಿಡುಗಡೆ

Suddi Udaya

ಹೇಡ್ಯದಿಂದ ಕುಕ್ಕಾವುವರೆಗೆ ಹದಗೆಟ್ಟ ರಸ್ತೆ: ಕಡಿರುದ್ಯಾವರ ನವೀನ್ ರವರಿಂದ ದುರಸ್ತಿ ಕಾರ್ಯ

Suddi Udaya

ಮಿತ್ತಬಾಗಿಲು ಸಾವ೯ಜನಿಕ ಶ್ರೀ ಗಣೇಶೋತ್ಸವ ಸಮಿತಿ , ಮಹಿಳಾ ವಿಭಾಗದ ವತಿಯಿಂದ ಬೆಳ್ಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ಹಾಗೂ ಶ್ರೀ ಸೂಕ್ತ ಹವನ

Suddi Udaya

ಬ್ರಹ್ಮಶ್ರೀ‌ ನಾರಾಯಣ ಗುರು ‌ಕುಣಿತ ಭಜನಾ ತಂಡ‌ ಉದ್ಘಾಟನೆ

Suddi Udaya

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಕುಕ್ಕಳದ ಶ್ರೇಯಸ್ ಪೂಜಾರಿ ಆಯ್ಕೆ

Suddi Udaya
error: Content is protected !!