26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯ ಭಜನಾ ಮಂಡಳಿಗಳ ಸಭೆ

ಮಡಂತ್ಯಾರು : ಶ್ರೀ ಕ್ಷೇತ್ರ ಧರ್ಮಸ್ಥಳ ಭಜನಾ ಪರಿಷತ್ ಮಡಂತ್ಯಾರು ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಸಭೆಯನ್ನು ಇತ್ತೀಚೆಗೆ ಮಡಂತ್ಯಾರು ಯೋಜನಾ ಕಚೇರಿಯಲ್ಲಿ ನಡೆಸಲಾಯಿತು. ಸೇವಾಪ್ರತಿನಿಧಿಯಾಗಿರುವ ಶ್ರೀಮತಿ ಹರಿಣಿ ಇವರ ಸ್ವಾಗತದೊಂದಿಗೆ ಸಭೆಯು ನಡೆಯಿತು.

ಯೋಜನಾ ಮೇಲ್ವಿಚಾರಕ ವಸಂತ್ ಪ್ರಸ್ತಾವಿಕ ಮಾತುಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ತಾಲೂಕು ಭಜನಾ ಪರಿಷತ್ ನ ಕಾರ್ಯದರ್ಶಿಗಳಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯೂರು ಇವರು ಭಜನಾ ಮಂಡಳಿಗಳ ಸರಕಾರದ ನಿಯಮಾನುಸಾರ ನೊಂದಾವಣಿಯ ಬಗ್ಗೆ ಭಜನಾ ಮಂಡಳಿಗಳ ಜಾಗದ ರೆಕಾರ್ಡಿನ ಬಗ್ಗೆ ಹಾಗೂ ಮಂಡಳಿಗಳಿಗೆ ಈಗ ಇರುವ ಇನ್ನಿತರ ಮೂಲಭೂತ ಸೌಕರ್ಯಗಳ ಸಮಸ್ಯೆ ಮತ್ತು ಅಂತಹ ಸಮಸ್ಯೆಗಳಿಗೆ ಹುಡುಕಿಕೊಳ್ಳಬೇಕಾದ ಪರಿಹಾರಗಳ ಬಗ್ಗೆ ಮಾಹಿತಿ ನೀಡಿದರು.

ನಮ್ಮ ಸನಾತನ ಧರ್ಮ ಸಂಸ್ಕೃತಿಯನ್ನು ಉಳಿಸಿ ಅದನ್ನು ಬಲವರ್ಧನೆಗೊಳಿಸಲು ನಮ್ಮ ಭಜಕ ಸಹೋದರರೊಂದಿಗೆ ಸಹೋದರಿಯರು ಮತ್ತು ಮಾತೆಯರು ಕೈಜೋಡಿಸಬೇಕು ಹಾಗೂ ನಮ್ಮ ಮಕ್ಕಳಿಗೆ ಧರ್ಮ ಜಾಗೃತಿಯೊಂದಿಗೆ ಗುರು ಹಿರಿಯರಿಗೆ ಗೌರವ ನೀಡುವುದನ್ನು ಮನೆಯಲ್ಲಿ ಹೇಳಿಕೊಡಬೇಕು ಎಂದರು. ನಂತರ ಭಜನಾ ‌ತಂಡಗಳ ಪದಾಧಿಕಾರಿಗಳು ಆಯಾ ತಂಡದ ಕೆಲವೊಂದು ವಿಚಾರಗಳ ಬಗ್ಗೆ ಮಾಹಿತಿ ನೀಡಿದರು. ನಂತರ ಸೇವಾ ಪ್ರತಿನಿಧಿಯವರ ವಂದನಾರ್ಪಣೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.

ಸಭೆಯಲ್ಲಿ ಮಡಂತ್ಯಾರು ವಲಯ ಸಂಯೋಜಕರಾದ ಪ್ರವೀಣ್ ಹೆಗ್ಡೆ ಮಡಂತ್ಯಾರು ಹಾಗೂ ಪಣಕಜೆ, ಸೊಣಂದೂರು, ಪಾರೆಂಕಿ, ಪುರಿಯ ಮತ್ತು ಮಂಜಲಪಲ್ಕೆ ಭಜನಾ ತಂಡಗಳ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಲ್ಮoಜದಲ್ಲಿ ಗ್ರಾಮ ಒನ್ ನಾಗರಿಕ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಮುಳಿಯ ಜ್ಯುವೆಲ್ಸ್ ನಲ್ಲಿ 77ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಗುರುವಾಯನಕೆರೆ ಮೆಡೆಕ್ಸ್ ಪಾಲಿಕ್ಲಿನಿಕ್ಸ್ ನಲ್ಲಿ ಖಾಸಗಿ ಬಸ್ ನೌಕರರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಸಚಿವರಿಂದ ಸಭೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!