37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಕಣಿಯೂರು ವಲಯದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ವಾಣಿಶ್ರೀ ಭಜನಾ ಮಂದಿರದಲ್ಲಿ ಶ್ರೀಮತಿ ಪಾರ್ವತಿ ರವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ದಾನೇಶ್ವರಿ ದೀಪಾ ಬೆಳಗಿಸಿ ಆರೋಗ್ಯ ರಕ್ಷಣೆಯಲ್ಲಿ ಪರಿಸರ ಸ್ನೇಹಿ ಮೇನ್ ಸುರಲ್ ಕಪ್ ಬಳಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾನಿರ್ದೇಶಕರಾದ ಮಹಾಬಲ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ಮಹಿಳೆಯರಿಗೆ ತಮ್ಮ ನೋವು, ಕಷ್ಟಗಳನ್ನು ಹೇಳಿಕೊಳ್ಳಲು, ವೇದಿಕೆಬೇಕೆಂಬ ದೃಷ್ಟಿಯಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು ಜ್ಞಾನ ವಿಕಾಸ ಕೇಂದ್ರವನ್ನು ಪ್ರಾರಂಭಿಸಿದರು, ಮೂವತ್ತು ನಲವತ್ತು ವರ್ಷಗಳ ಹಿಂದೆ ಪ್ರತಿ ಮನೆಗಳಲ್ಲಿ ಟಿವಿ, ಮೊಬೈಲ್ ಫೋನ್ ಗಳು ಇರಲಿಲ್ಲ ಪ್ರಪಂಚದ ಹಾದು ಹೋಗುಗಳನ್ನು ತಿಳಿಯಲು ಕೇಂದ್ರವೇ ಮುಖ್ಯವಾಗಿತ್ತು ಇಲ್ಲಿ ಸಿಗುವ ಮಾಹಿತಿಯನ್ನು ಪಡಕೊಂಡು ಬದುಕು ಕಟ್ಟಿಕೊಂಡವರು ಎಷ್ಟೋ ಮಂದಿ ಇದ್ದಾರೆ ಪ್ರಸ್ತುತ ಜ್ಞಾನವಿಕಾಸವು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರು. ಕ್ಯಾಲಿಪೋರ್ನಿಯ ಬೆಕ್ರೆ ಯೂನಿವರ್ಸಿಟಿಯ ವಿದ್ಯಾರ್ಥಿನಿ ಯಾದ ಕುಮಾರಿ ಸನಾರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಸಂಗೀತ ರವರು ಮೆನ್ಸುರಲ್ ಕಪ್ ಖರೀದಿ ,ಬಳಕೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು.ಒಕ್ಕೂಟ ಅಧ್ಯಕ್ಷ ರಾದ ಬಾಲಕೃಷ್ಣ ಪೂಜಾರಿ, ಮಾಜಿ ಒಕ್ಕೂಟ ಅಧ್ಯಕ್ಷರಾದ ನಾಣ್ಯಪ್ಪ, ಸೇವಾಪ್ರತಿನಿಧಿ ವಸಂತಿ ಜ್ಞಾನ ವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು. ಸ್ವಾಗತವನ್ನು ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ನಿರೂಪಣೆಯನ್ನು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಹರಿಣಿ ನೆರವೇರಿಸಿದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಲಯನ್ಸ್ ಕ್ಲಬ್ ಜಿಲ್ಲಾ ರಾಜ್ಯಪಾಲೆ ಭಾರತಿ ಬಿ.ಎಂ. ಭೇಟಿ

Suddi Udaya

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ ಡಾ. ಇಂದ್ರೇಶ್ ಎನ್.ಎಸ್ ಭೇಟಿ

Suddi Udaya

ನಾರಾವಿ ಜನಜಾಗೃತಿ ವಲಯಾಧ್ಯಕ್ಷರ ಆಯ್ಕೆ ಸಭೆ ಜನಜಾಗೃತಿಯ ನೂತನ ವಲಯಾಧ್ಯಕ್ಷರಾಗಿ ಮೋಹನ್ ಅಂಡಿಂಜೆ ಆಯ್ಕೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಸದಸ್ಯರು, ಆಡಳಿತ ಮಂಡಳಿ, ಸಿಬ್ಬಂದಿ ವರ್ಗದವರ ಮಾನವೀಯ ಸ್ಪಂದನೆ: ಪುದುವೆಟ್ಟುವಿನಲ್ಲಿ ಬಡ ಕುಟುಂಬಕ್ಕೆ ನೂತನ ಮನೆಯ ನಿರ್ಮಾಣಕ್ಕೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜೂನಿಯರ್ ಕಾಲೇಜಿನಲ್ಲಿ ಸಿಇಟಿ ತರಬೇತಿ ಮತ್ತು ಸ್ಪೋಕನ್ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ

Suddi Udaya

ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ:ವೇಣೂರು ಸರ್ಕಾರಿ ಪದವಿ ಪೂರ್ವ(ಪ್ರೌಢಶಾಲಾ ವಿಭಾಗ ) ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya
error: Content is protected !!