ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಕಣಿಯೂರು ವಲಯದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ವಾಣಿಶ್ರೀ ಭಜನಾ ಮಂದಿರದಲ್ಲಿ ಶ್ರೀಮತಿ ಪಾರ್ವತಿ ರವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ದಾನೇಶ್ವರಿ ದೀಪಾ ಬೆಳಗಿಸಿ ಆರೋಗ್ಯ ರಕ್ಷಣೆಯಲ್ಲಿ ಪರಿಸರ ಸ್ನೇಹಿ ಮೇನ್ ಸುರಲ್ ಕಪ್ ಬಳಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾನಿರ್ದೇಶಕರಾದ ಮಹಾಬಲ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ಮಹಿಳೆಯರಿಗೆ ತಮ್ಮ ನೋವು, ಕಷ್ಟಗಳನ್ನು ಹೇಳಿಕೊಳ್ಳಲು, ವೇದಿಕೆಬೇಕೆಂಬ ದೃಷ್ಟಿಯಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು ಜ್ಞಾನ ವಿಕಾಸ ಕೇಂದ್ರವನ್ನು ಪ್ರಾರಂಭಿಸಿದರು, ಮೂವತ್ತು ನಲವತ್ತು ವರ್ಷಗಳ ಹಿಂದೆ ಪ್ರತಿ ಮನೆಗಳಲ್ಲಿ ಟಿವಿ, ಮೊಬೈಲ್ ಫೋನ್ ಗಳು ಇರಲಿಲ್ಲ ಪ್ರಪಂಚದ ಹಾದು ಹೋಗುಗಳನ್ನು ತಿಳಿಯಲು ಕೇಂದ್ರವೇ ಮುಖ್ಯವಾಗಿತ್ತು ಇಲ್ಲಿ ಸಿಗುವ ಮಾಹಿತಿಯನ್ನು ಪಡಕೊಂಡು ಬದುಕು ಕಟ್ಟಿಕೊಂಡವರು ಎಷ್ಟೋ ಮಂದಿ ಇದ್ದಾರೆ ಪ್ರಸ್ತುತ ಜ್ಞಾನವಿಕಾಸವು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರು. ಕ್ಯಾಲಿಪೋರ್ನಿಯ ಬೆಕ್ರೆ ಯೂನಿವರ್ಸಿಟಿಯ ವಿದ್ಯಾರ್ಥಿನಿ ಯಾದ ಕುಮಾರಿ ಸನಾರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಸಂಗೀತ ರವರು ಮೆನ್ಸುರಲ್ ಕಪ್ ಖರೀದಿ ,ಬಳಕೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು.ಒಕ್ಕೂಟ ಅಧ್ಯಕ್ಷ ರಾದ ಬಾಲಕೃಷ್ಣ ಪೂಜಾರಿ, ಮಾಜಿ ಒಕ್ಕೂಟ ಅಧ್ಯಕ್ಷರಾದ ನಾಣ್ಯಪ್ಪ, ಸೇವಾಪ್ರತಿನಿಧಿ ವಸಂತಿ ಜ್ಞಾನ ವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು. ಸ್ವಾಗತವನ್ನು ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ನಿರೂಪಣೆಯನ್ನು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಹರಿಣಿ ನೆರವೇರಿಸಿದರು

Related posts

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya

ಬೆದ್ರಬೆಟ್ಟು ರಿಫಾಯ್ಯಾ ಜುಮಾ ಮಸೀದಿಯಲ್ಲಿ ಸಂಭ್ರಮದ ರಂಜಾನ್ ಆಚರಣೆ

Suddi Udaya

ಉಜಿರೆ ರತ್ನಮಾನಸ ನಿಲಯದಲ್ಲಿ ಕ್ರಿಸ್ಮಸ್ ಆಚರಣೆ ಮತ್ತು ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಮಾಹಿತಿ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya
error: Content is protected !!