23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಕಣಿಯೂರು ವಲಯದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ವಾಣಿಶ್ರೀ ಭಜನಾ ಮಂದಿರದಲ್ಲಿ ಶ್ರೀಮತಿ ಪಾರ್ವತಿ ರವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ದಾನೇಶ್ವರಿ ದೀಪಾ ಬೆಳಗಿಸಿ ಆರೋಗ್ಯ ರಕ್ಷಣೆಯಲ್ಲಿ ಪರಿಸರ ಸ್ನೇಹಿ ಮೇನ್ ಸುರಲ್ ಕಪ್ ಬಳಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾನಿರ್ದೇಶಕರಾದ ಮಹಾಬಲ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ಮಹಿಳೆಯರಿಗೆ ತಮ್ಮ ನೋವು, ಕಷ್ಟಗಳನ್ನು ಹೇಳಿಕೊಳ್ಳಲು, ವೇದಿಕೆಬೇಕೆಂಬ ದೃಷ್ಟಿಯಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು ಜ್ಞಾನ ವಿಕಾಸ ಕೇಂದ್ರವನ್ನು ಪ್ರಾರಂಭಿಸಿದರು, ಮೂವತ್ತು ನಲವತ್ತು ವರ್ಷಗಳ ಹಿಂದೆ ಪ್ರತಿ ಮನೆಗಳಲ್ಲಿ ಟಿವಿ, ಮೊಬೈಲ್ ಫೋನ್ ಗಳು ಇರಲಿಲ್ಲ ಪ್ರಪಂಚದ ಹಾದು ಹೋಗುಗಳನ್ನು ತಿಳಿಯಲು ಕೇಂದ್ರವೇ ಮುಖ್ಯವಾಗಿತ್ತು ಇಲ್ಲಿ ಸಿಗುವ ಮಾಹಿತಿಯನ್ನು ಪಡಕೊಂಡು ಬದುಕು ಕಟ್ಟಿಕೊಂಡವರು ಎಷ್ಟೋ ಮಂದಿ ಇದ್ದಾರೆ ಪ್ರಸ್ತುತ ಜ್ಞಾನವಿಕಾಸವು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರು. ಕ್ಯಾಲಿಪೋರ್ನಿಯ ಬೆಕ್ರೆ ಯೂನಿವರ್ಸಿಟಿಯ ವಿದ್ಯಾರ್ಥಿನಿ ಯಾದ ಕುಮಾರಿ ಸನಾರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಸಂಗೀತ ರವರು ಮೆನ್ಸುರಲ್ ಕಪ್ ಖರೀದಿ ,ಬಳಕೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು.ಒಕ್ಕೂಟ ಅಧ್ಯಕ್ಷ ರಾದ ಬಾಲಕೃಷ್ಣ ಪೂಜಾರಿ, ಮಾಜಿ ಒಕ್ಕೂಟ ಅಧ್ಯಕ್ಷರಾದ ನಾಣ್ಯಪ್ಪ, ಸೇವಾಪ್ರತಿನಿಧಿ ವಸಂತಿ ಜ್ಞಾನ ವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು. ಸ್ವಾಗತವನ್ನು ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ನಿರೂಪಣೆಯನ್ನು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಹರಿಣಿ ನೆರವೇರಿಸಿದರು

Related posts

ಉಜಿರೆ ಶೀತಲ್ ಗಾರ್ಡನ್ ನಲ್ಲಿ ಸುಸಜ್ಜಿತವಾದ ವಿಜಯ ಸಭಾಭವನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಶೃಂಗೇರಿ ಶ್ರೀ ಶಾರದಾ ಪೀಠದ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರು ಭೇಟಿ

Suddi Udaya

ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಸಮುದಾಯ ಭವನಕ್ಕೆ ಶಿಲಾನ್ಯಾಸ

Suddi Udaya

ಬಂದಾರು ಗ್ರಾ.ಪಂ. ಮತ್ತು ಸಿದ್ಧಿ ವಿನಾಯಕ ಸಂಜೀವಿನಿ ಒಕ್ಕೂಟದ ಮಹಾಸಭೆ ಹಾಗೂ ಮಹಿಳಾ ಗ್ರಾಮಸಭೆ

Suddi Udaya

ಶಿಬಾಜೆಯಲ್ಲಿ ಎರಡು ವರ್ಷಗಳಿಂದ ಹಸಿ ಮೀನಿನ ವ್ಯಾಪಾರ ಮಾಡುತ್ತಿದ್ದ ನೋಣಯ್ಯ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಾಡು ಹಂದಿ ಬೈಕ್ ಗೆ ಡಿಕ್ಕಿ ತಂದೆ ಮಗನಿಗೆ ಗಾಯ

Suddi Udaya
error: Content is protected !!