July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

ಕಣಿಯೂರು : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಕಣಿಯೂರು ವಲಯದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ ವಾಣಿಶ್ರೀ ಭಜನಾ ಮಂದಿರದಲ್ಲಿ ಶ್ರೀಮತಿ ಪಾರ್ವತಿ ರವರ ಅಧ್ಯಕ್ಷತೆಯಲ್ಲಿ ನಡೆದಿದ್ದು ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾದ ಶ್ರೀಮತಿ ದಾನೇಶ್ವರಿ ದೀಪಾ ಬೆಳಗಿಸಿ ಆರೋಗ್ಯ ರಕ್ಷಣೆಯಲ್ಲಿ ಪರಿಸರ ಸ್ನೇಹಿ ಮೇನ್ ಸುರಲ್ ಕಪ್ ಬಳಕೆಯ ಮಹತ್ವದ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೆ ಆಗಮಿಸಿದ ಜಿಲ್ಲಾನಿರ್ದೇಶಕರಾದ ಮಹಾಬಲ ಕುಲಾಲ್ ಪ್ರಾಸ್ತಾವಿಕವಾಗಿ ಮಾತನಾಡುತ್ತ ಮಹಿಳೆಯರಿಗೆ ತಮ್ಮ ನೋವು, ಕಷ್ಟಗಳನ್ನು ಹೇಳಿಕೊಳ್ಳಲು, ವೇದಿಕೆಬೇಕೆಂಬ ದೃಷ್ಟಿಯಲ್ಲಿ ಮಾತೃಶ್ರೀ ಹೇಮಾವತಿ ಅಮ್ಮನವರು ಜ್ಞಾನ ವಿಕಾಸ ಕೇಂದ್ರವನ್ನು ಪ್ರಾರಂಭಿಸಿದರು, ಮೂವತ್ತು ನಲವತ್ತು ವರ್ಷಗಳ ಹಿಂದೆ ಪ್ರತಿ ಮನೆಗಳಲ್ಲಿ ಟಿವಿ, ಮೊಬೈಲ್ ಫೋನ್ ಗಳು ಇರಲಿಲ್ಲ ಪ್ರಪಂಚದ ಹಾದು ಹೋಗುಗಳನ್ನು ತಿಳಿಯಲು ಕೇಂದ್ರವೇ ಮುಖ್ಯವಾಗಿತ್ತು ಇಲ್ಲಿ ಸಿಗುವ ಮಾಹಿತಿಯನ್ನು ಪಡಕೊಂಡು ಬದುಕು ಕಟ್ಟಿಕೊಂಡವರು ಎಷ್ಟೋ ಮಂದಿ ಇದ್ದಾರೆ ಪ್ರಸ್ತುತ ಜ್ಞಾನವಿಕಾಸವು ಹೆಮ್ಮರವಾಗಿ ಬೆಳೆದು ನಿಂತಿದೆ ಎಂದರು. ಕ್ಯಾಲಿಪೋರ್ನಿಯ ಬೆಕ್ರೆ ಯೂನಿವರ್ಸಿಟಿಯ ವಿದ್ಯಾರ್ಥಿನಿ ಯಾದ ಕುಮಾರಿ ಸನಾರವರು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಜ್ಞಾನ ವಿಕಾಸ ವಿಭಾಗದ ಯೋಜನಾಧಿಕಾರಿ ಶ್ರೀಮತಿ ಸಂಗೀತ ರವರು ಮೆನ್ಸುರಲ್ ಕಪ್ ಖರೀದಿ ,ಬಳಕೆಯ ಹಂತಗಳ ಬಗ್ಗೆ ಮಾಹಿತಿ ನೀಡಿದರು.ಒಕ್ಕೂಟ ಅಧ್ಯಕ್ಷ ರಾದ ಬಾಲಕೃಷ್ಣ ಪೂಜಾರಿ, ಮಾಜಿ ಒಕ್ಕೂಟ ಅಧ್ಯಕ್ಷರಾದ ನಾಣ್ಯಪ್ಪ, ಸೇವಾಪ್ರತಿನಿಧಿ ವಸಂತಿ ಜ್ಞಾನ ವಿಕಾಸ ಕೇಂದ್ರ ಸದಸ್ಯರು ಉಪಸ್ಥಿತರಿದ್ದರು. ಸ್ವಾಗತವನ್ನು ತಾಲೂಕಿನ ಯೋಜನಾಧಿಕಾರಿ ದಯಾನಂದ ಪೂಜಾರಿ, ನಿರೂಪಣೆಯನ್ನು ಜ್ಞಾನ ವಿಕಾಸ ಸಮನ್ವಯಧಿಕಾರಿ ಶ್ರೀಮತಿ ಹರಿಣಿ ನೆರವೇರಿಸಿದರು

Related posts

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕುತ್ಲೂರು ಉನ್ನತೀಕರಿಸಿದ ಸರಕಾರಿ ಶಾಲೆಯ ತೋಟ ಲೋಕಾರ್ಪಣೆ: ಶಿಕ್ಷಣ ಸಂಸ್ಥೆಗಳ ಅಭಿವೃದ್ಧಿಗೆ ಸಾಮೂಹಿಕ ಪ್ರಯತ್ನ ಅಗತ್ಯ-ಹರೇಕಳ ಹಾಜಬ್ಬ

Suddi Udaya

ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ವಿಧಾನ ಪರಿಷತ್ತಿನ ಶಾಸಕ ಪ್ರತಾಪ್ ಸಿಂಹ ನಾಯಕ್ ನೇಮಕ

Suddi Udaya

ಹ‌ರ್ ಘರ್ ತಿರಂಗಾ ಅಭಿಯಾನ ಪ್ರಯುಕ್ತ ಶಾಸಕ ಹರೀಶ್ ಪೂಂಜರ ಮನೆಯಲ್ಲಿ ರಾಷ್ಟ್ರ ಧ್ವಜಾರೋಹಣ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ

Suddi Udaya

ಬೆಳ್ತಂಗಡಿ: ಮ್ಯಾಟ್ರಿಕ್ಸ್ ಹೋಂಡಾ ಬಳಿ ಮರ ಬಿದ್ದು ಹಾನಿ

Suddi Udaya
error: Content is protected !!