September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಯಾರು ದೇವಸ್ಥಾನದಲ್ಲಿ ಕಳ್ಳತನಕ್ಕೆ ಯತ್ನ: ಬೆಳ್ತಂಗಡಿ ಪೊಲೀಸ್ ರಿಂದ ತನಿಖೆ

ಬೆಳ್ತಂಗಡಿ: ಇಲ್ಲಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಜೂ.13 ರಂದು ರಾತ್ರಿ 11 ಗಂಟೆ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿದ್ದು ದೇವಸ್ಥಾನದ ಸಿಬ್ಬಂದಿ ಎಚ್ಚರಗೊಂಡು ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾದ ಘಟನೆ ನಡೆದಿದೆ.

ದೇವಸ್ಥಾನದ ಸಮೀಪವಿರುವ ಗೋಡೌನ್‌ನಲ್ಲಿರುವ ಕಂಬಗಳನ್ನು ಉಪಯೋಗಿಸಿ ಏಣಿ ಮಾಡಿ ದೇವಸ್ಥಾನದ ಹಿಂಬದಿಯಿಂದ ಕಳ್ಳತನಕ್ಕೆ ಯತ್ನ ನಡೆದಿದ್ದು ಶಬ್ದಕ್ಕೆ ಎಚ್ಚರಗೊಂಡ ಸಿಬ್ಬಂದಿ ತಕ್ಷಣ ಬೊಬ್ಬೆ ಹೊಡೆದಿದ್ದು ಕಳ್ಳರು ಪರಾರಿಯಾಗಿದ್ದಾರೆ.

ಅದೇ ದಿನ ಕುತ್ಯಾರು ದೇವಸ್ಥಾನದ ಸಮೀಪದ ಹಾಡುಹಗಲೇ ಮನೆಯಲ್ಲಿ ಕಳ್ಳತನ ನಡೆದಿದ್ದು ಈ ಘಟನೆ ಸಾರ್ವಜನಿಕರಲ್ಲಿ ಆತಂಕ ಹುಟ್ಟಿಸಿದೆ. ಒಂದೇ ದಿನ ಎರಡು ಕಡೆಗಳಲ್ಲಿ ಕಳ್ಳತನ ನಡೆದಿದ್ದು, ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದು ಇನ್ನಷ್ಟೇ ಮಾಹಿತಿಗಳು ತಿಳಿಯಲಿದೆ..

Related posts

22 ವರ್ಷ ಭಾರತಮಾತೆಯ ಸೇವೆ ಸಲ್ಲಿಸಿ ನಿವೃತ್ತಿಗೊಂಡ ಲಾಯಿಲದ ಅಶೋಕ್ ಕುಮಾರ್ ರವರಿಗೆ ಬೆಳ್ತಂಗಡಿಯಲ್ಲಿ ಭವ್ಯ ಸ್ವಾಗತ

Suddi Udaya

ಧರ್ಮಸ್ಥಳ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ ವಕೀಲರ ಸಂಘದ ನಿಯೋಗದಿಂದ ಹೈಕೋರ್ಟ್ ರಿಜಿಸ್ಟ್ರಾರ್ ರಾಧಾ ರವರ ಭೇಟಿ; ನೂತನ ನ್ಯಾಯಾಲಯ ಸಂಕೀರ್ಣ ಶಂಕು ಸ್ಥಾಪನೆಯ ರೂಪುರೇಷೆಗಳ ಬಗ್ಗೆ ಚರ್ಚೆ

Suddi Udaya

ಮಚ್ಚಿನ: ಆಕಸ್ಮಿಕವಾಗಿ ಮನೆಯ ಹಟ್ಟಿಗೆ ಬೆಂಕಿ : ಅಪಾರ ನಷ್ಟ

Suddi Udaya

ಸುಲ್ಕೇರಿ ಶ್ರೀ ನೇಮಿನಾಥ ಸ್ವಾಮಿ ಬಸದಿಯ ಜೀರ್ಣೋದ್ದಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.10 ಲಕ್ಷ ದೇಣಿಗೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಫ್ಯಾಬ್ರಿಕ್ ಲೂಮ್ ರೆಡಿಮೇಡ್ ಶಾಪ್ ಉದ್ಘಾಟನೆ

Suddi Udaya
error: Content is protected !!