38.6 C
ಪುತ್ತೂರು, ಬೆಳ್ತಂಗಡಿ
March 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

ಉಜಿರೆ:  ಗ್ರಾಹಕರ ಸಂತೃಪ್ತಿಯೇ ಬ್ಯಾಂಕಿನ ಯಶಸ್ಸಿಗೆ ಕಾರಣ. ಸಿಬಂದಿಗಳ ನಗುಮುಖದ ಸೇವೆಯಿಂದ ಯಾವುದೇ ಸಂಸ್ಥೆಯ  ಬೆಳವಣಿಗೆಯಾಗುವುದು.ಹಿಂದಿನ  ಕಾರ್ಪೋರೇಶನ್ ಬ್ಯಾಂಕ್ ಮತ್ತು ಈಗಿನ  ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ಸೇವಾ ವ್ಯವಹಾರದಲ್ಲಿ ಯಾವುದೇ ವ್ಯತ್ಯಾಸವಿಲ್ಲ. ನವೀಕೃತ ಉಜಿರೆ ಶಾಖೆ ಗ್ರಾಹಕ ಉದ್ಯಮಿಗಳ  ಸಹಕಾರದಿಂದ ರೂ 200 ಕೋಟಿ  ಠೇವಣಿಯ ಗುರಿ  ತಲುಪಲಿ ಎಂದು ಯೂನಿಯನ್ ಬ್ಯಾಂಕ್ ಒಫ್ ಇಂಡಿಯಾದ ಮಂಗಳೂರು ವಲಯ ಮುಖ್ಯಸ್ಥೆ ಶ್ರೀಮತಿ ರೇಣು ಕೆ.ನಾಯರ್ ನುಡಿದರು.                                       

ಅವರು ಜೂ 14 ರಂದು ಉಜಿರೆ ಮಾವಂತೂರು ಸಂಕೀರ್ಣದಲ್ಲಿ ಯೂನಿಯನ್ ಬ್ಯಾಂಕ್ ಒಫ್  ಇಂಡಿಯಾದ ನವೀಕೃತ ಶಾಖೆ ಹಾಗು  ಎ ಟಿ ಎಂ  ಕೇಂದ್ರವನ್ನು ಉದ್ಘಾಟಿಸಿ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾರಂಭದ ಮುಖ್ಯ ಅತಿಥಿ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು  ಉಜಿರೆಯ ನಾಗರಿಕರು ಕಾರ್ಪೋರೇಶನ್ ಬ್ಯಾಂಕ್ ನೊಂದಿಗಿದ್ದ ಭಾವನಾತ್ಮಕ ಸಂಬಂಧವನ್ನು ಯೂನಿಯನ್ ಬ್ಯಾಂಕ್ ನೊಂದಿಗೆ ಮುಂದುವರಿಸಿಕೊಂಡು ಹೋಗುತ್ತಿದ್ದಾರೆ. ಶಾಖೆಯನ್ನು  ಉನ್ನತೀಕರಿಸಿ ನವೀಕರಿಸಿದ  ಸವಲತ್ತು ,ಸೇವಾ ಸೌಲಭ್ಯಗಳನ್ನು  ಗ್ರಾಹಕರು ಪಡೆದು  ಆರ್ಥಿಕವಾಗಿ ಸದೃಢರಾಗಲಿ ಎಂದು ಆಶಿಸಿ ಶುಭ ಕೋರಿದರು.                                   

ಮುಖ್ಯ ಅತಿಥಿಗಳಾಗಿ ಉಜಿರೆ ಲಕ್ಷ್ಮೀ ಗ್ರೂಪ್ ಮಾಲಕ ಮೋಹನಕುಮಾರ್ ,ಉಜಿರೆ ಎಸ್ .ಡಿ.ಎಂ.ಕಾಲೇಜು ಪ್ರಾಂಶುಪಾಲ ಡಾ!ಬಿ. ಎ .ಕುಮಾರ ಹೆಗ್ಡೆ ಮತ್ತು ಉಜಿರೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ  ಶುಭಾಶಂಸನೆಗೈದರು. ಇದೆ ಸಂದರ್ಭದಲ್ಲಿ  ಶಾಖೆಯ ಹಿರಿಯ ಗ್ರಾಹಕರಾದ ಮೋಹನಕುಮಾರ್ ,ಸೂರಜ್ ಅಡೂರ್ ಮತ್ತು ಜೋಸೆಫ್ ಕೆ.ಸಿ. ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.                                                         

ಯೂನಿಯನ್ ಬ್ಯಾಂಕಿನ ಪ್ರದೇಶಕ ಕಚೇರಿಯ  ಮುಖ್ಯಸ್ಥ ಮಹೇಶ್ ಜೆ. ಸ್ವಾಗತಿಸಿ, ಪ್ರಸ್ತಾವಿಸಿ, ಯೂನಿಯನ್ ಬ್ಯಾಂಕ್ ರಾಷ್ಟ್ರದ 5ನೇ ಅತಿ ದೊಡ್ಡ ಬ್ಯಾಂಕ್,ಜಿಲ್ಲೆಯಲ್ಲಿ 3ನೇ ಸ್ಥಾನ ಪಡೆದು  ಗ್ರಾಹಕ ಸ್ನೇಹಿಯಾಗಿ ತಳಮಟ್ಟದ ಉದ್ಯಮದಾರರಿಗೆ ಆರ್ಥಿಕ ನೆರವು ನೀಡಿ ಮೇಲೆ ಬರಲು ಅವಕಾಶ ನೀಡುತ್ತಿದೆ. ಗ್ರಾಮಾಂತರ ಪ್ರದೇಶದ ಜನರ  ಬಗೆಗೆ ವಿಶೇಷ ಕಾಳಜಿ ಹೊಂದಿ  ಅವರ ಸಬಲೀಕರಣಕ್ಕೆ ವಿಶೇಷ ಆದ್ಯತೆ ನೀಡುವುದು ಎಂದು ನುಡಿದು ಉಜಿರೆ ಶಾಖೆಗೆ ಎಲ್ಲರ ಸಹಕಾರ ಕೋರಿದರು. ಉಜಿರೆ ಶಾಖೆಯ ಸಿಬಂದಿ ಸಚಿನ್  ನಿರೂಪಿಸಿದ ಕಾರ್ಯಕ್ರಮದಲ್ಲಿ ,ಉಜಿರೆ ಶಾಖಾಧಿಕಾರಿ ನಿತಿನ್ ಯು ವಂದಿಸಿದರು.

Related posts

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya

ಕಸ್ತೂರಿ ರಂಗನ್ ವರದಿ ವಿರುದ್ಧ ಪ್ರತಿಭಟನೆಗೆ ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಸಂಪೂರ್ಣ ಬೆಂಬಲ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಬಳಂಜ: ಮರಿಯಾಲಡೊಂಜಿ ಐತಾರ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ: ಆ. 20 ಆಟಿಕೂಟದ ಗಮ್ಮತ್ ಲೇಸ್, ವಾರ್ಷಿಕ ಮಹಾಸಭೆ

Suddi Udaya

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿಡೊಂಜಿ ದಿನ

Suddi Udaya
error: Content is protected !!