September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಭೆಯನ್ನು ಕಲ್ಲೇರಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ವೇದಿಕೆಯಲ್ಲಿ ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ಉಪಾಧ್ಯಕ್ಷರಾದ ಜಯಪ್ರಕಾಶ್ ಕಡಮ್ಮಾಜೆರವರು ಭಜನಾ ಮಂಡಳಿಯ ಅಸ್ತಿತ್ವದ ಮಾಹಿತಿಯನ್ನು ನೀಡುತ್ತಾ ವಲಯದ ಭಜನಾ ಮಂಡಳಿಯ ಬಲವರ್ಧನೆಗೆ ಮುಂದಿನ ಪೀಳಿಗೆಗೆ ಧರ್ಮದ ಸಂಸ್ಕೃತಿಯನ್ನು ತಿಳಿಸುವಲ್ಲಿ ಹೆತ್ತವರು ಪ್ರೇರಣೆ ನೀಡಿದರೆ ಮುಂದಿನ ದಿನಗಳಲ್ಲಿ ಭಜನಾ ಮಂಡಳಿಯ ಯಶಸ್ವಿಗೆ ಕಾರಣವಾಗುತ್ತದೆ ಎಂದರು.

ಬೆಳ್ತಂಗಡಿ ತಾಲೂಕಿನ ಭಜನಾ ಪರಿಷತ್ ನ ಕಾರ್ಯದರ್ಶಿಯವರಾದ ಚಂದ್ರಶೇಖರ್ ಸಾಲ್ಯಾನ್ ಕೊಯ್ಯುರ್ ರವರು ಭಜನಾ ಮಂಡಳಿಗಳ ದಾಖಲಾತಿಗಳನ್ನು ತಯಾರಿಸಿ ಭಜನಾ ಮಂಡಳಿಗಳ ಸಮಿತಿಗಳನ್ನು ಬಲಪಡಿಸಿ ನಾವೆಲ್ಲರೂ ಒಗ್ಗಟ್ಟಿನಿಂದ ಜವಾಬ್ದಾರಿ ವಹಿಸಿದರೆ ಭಜನಾ ಮಂಡಳಿಯ ಸರ್ವತೋಮುಖ ಅಭಿವೃದ್ಧಿ ಸುಲಭ ಸಾಧ್ಯ ಎಂದರು.

ಈ ಸಂದರ್ಭದಲ್ಲಿ ತಣ್ಣೀರುಪಂತ ವಲಯದ ಭಜನಾ ಮಂಡಳಿಯ ಸಂಯೋಜಕರಾದ ರಾಜಶೇಖರ್ ರೈ, ತಣ್ಣೀರುಪಂತ ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರು ವಲಯದ ಸೇವಾಪ್ರತಿನಿಧಿಯವರು ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕರು ಕಾರ್ಯಕ್ರಮ ನಿರ್ವಹಿಸಿದರು.

Related posts

ಸೆ.19: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಶ್ರೀ  ಗಣೇಶ ಚತುರ್ಥಿ ಪ್ರಯುಕ್ತ 108 ತೆಂಗಿನ ಕಾಯಿ ಗಣಹೋಮ ಹಾಗೂ ರಂಗಪೂಜೆ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆಯ ರಾಜ್ಯ ಸಮಿತಿ ಸದಸ್ಯರಾಗಿ ಉಮಾ ಸುನಿಲ್ ಆಯ್ಕೆ

Suddi Udaya

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿ ಮೇಲೆ ಪೋಕ್ಸೋ ಪ್ರಕರಣ ದಾಖಲು

Suddi Udaya

ಕರಿಮಣೇಲು: ದೇಲಂಪುರಿ ಕ್ಷೇತ್ರದ ವಠಾರದಲ್ಲಿ ವಿವಿಧ ಬಗೆಯ ಗಿಡಗಳ ನಾಟಿ ಕಾರ್ಯಕ್ರಮ

Suddi Udaya

ಫೆ. 01: ಬೆಳಾಲು ಡಿಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಾಲಿಬಾಲ್‌ ಪಂದ್ಯಾಟ

Suddi Udaya
error: Content is protected !!