April 2, 2025
ಕೃಷಿಗ್ರಾಮಾಂತರ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ(RTC) ಮತ್ತು ಆಧಾರ್‌ ಪ್ರತಿಯೊಂದಿಗೆ ತೋಟಗಾರಿಕೆ ಇಲಾಖೆ (ಜಿ.ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಚ ಫಸಲನ್ನು ಖರೀದಿಸಲು ಕಂಪೆನಿಯವರಿಂದ ಅನುಕೂಲವೂ ಇದೆ, ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ, ಹನಿ ನೀರಾವರಿ, ಯಾಂತ್ರೀಕರಣ ಸಹಾಯಧನ ಸೌಲಭ್ಯವಿದೆ’ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಿಬ್ಬಂದಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣವರ ನೇ. ಮೊಬೈಲ್ ನಂ: 8123921087

ವೇಣೂರು ಹೋಬಳಿ: ಭೀಮರಾಯ ಸೊಡಗಿ, ಮೊಬೈಲ್ ನಂ: 9741713598

ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಧರ್ಮಸ್ಥಳ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆಯ ಶ್ರೀ ರಾಮ ಮಂದಿರದ ಉದ್ಘಾಟನೆಯ ಆಹ್ವಾನ ಪತ್ರಿಕೆ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಶಿಶಿಲ ಅಂಗನವಾಡಿ ಕೇಂದ್ರಕ್ಕೆ ಬ್ಯಾಂಕ್ ಆಫ್ ಬರೋಡದಿಂದ ಕುರ್ಚಿ ಹಾಗೂ ಮೇಜು ಕೊಡುಗೆ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ನಾರಾವಿ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ಮ್ಯಾನೇಜರ್ ಸುಧೀರ್ ಎಸ್.ಪಿ ಬೆಳ್ತಂಗಡಿ ಶಾಖೆಗೆ ವರ್ಗಾವಣೆ: ಗ್ರಾಹಕರು ಹಾಗೂ ಸಿಬ್ಬಂದಿಗಳಿಂದ ಬಿಳ್ಕೋಡುಗೆ ಸಮಾರಂಭ

Suddi Udaya
error: Content is protected !!