22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕೃಷಿಗ್ರಾಮಾಂತರ ಸುದ್ದಿ

ತಾಳೆ ಬೆಳೆ ಪ್ರದೇಶ ವಿಸ್ತರಣೆ: ಅರ್ಜಿ ಆಹ್ವಾನ

ಬೆಳ್ತಂಗಡಿ: ಕೇಂದ್ರ ಪುರಸ್ಕೃತ ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ (ತಾಳೆ ಎಣ್ಣೆ) ಯೋಜನೆಯಡಿ 2023-24ನೇ ಸಾಲಿನಲ್ಲಿ ತಾಳೆ ಬೆಳೆ ಹೊಸ ಪ್ರದೇಶ ವಿಸ್ತರಣೆ ಕೈಗೊಳ್ಳುವ ರೈತರಿಗೆ ಪ್ರೋತ್ಸಾಹಧನ ಲಭ್ಯವಿದೆ. ಆಸಕ್ತ ರೈತರು ತಮ್ಮ ಜಮೀನಿನ ಪಹಣಿ(RTC) ಮತ್ತು ಆಧಾರ್‌ ಪ್ರತಿಯೊಂದಿಗೆ ತೋಟಗಾರಿಕೆ ಇಲಾಖೆ (ಜಿ.ಪಂ) ಬೆಳ್ತಂಗಡಿ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದು.

ತಾಳೆಬೆಳೆ ಬೆಳೆಯಲು ತೋಟಗಾರಿಕೆ ಇಲಾಖೆಯಿಂದ ಅನುಮೋದಿತ ಕಂಪನಿಗಳಿಂದ ಗಿಡಗಳನ್ನು ಉಚಿತವಾಗಿ ವಿತರಿಸಲಾಗುತ್ತದೆ. ಗಿಡಗಳ ನಿರ್ವಹಣೆಗೆ ಮೂರು ವರ್ಷಗಳ ನಿರ್ವಹಣ ವೆಚ್ಚ ಫಸಲನ್ನು ಖರೀದಿಸಲು ಕಂಪೆನಿಯವರಿಂದ ಅನುಕೂಲವೂ ಇದೆ, ತಾಳೆ ಬೆಳೆ ಬೆಂಬಲ ಬೆಲೆಯೂ ದೊರೆಯಲಿದೆ, ಹನಿ ನೀರಾವರಿ, ಯಾಂತ್ರೀಕರಣ ಸಹಾಯಧನ ಸೌಲಭ್ಯವಿದೆ’ ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಈ ಕೆಳಕಂಡ ಸಿಬ್ಬಂದಿ ವರ್ಗದವರನ್ನು ಸಂಪರ್ಕಿಸಲು ಕೋರಿದೆ.

ಬೆಳ್ತಂಗಡಿ ಹೋಬಳಿ: ಮಹಾವೀರ ಶೇಬಣ್ಣವರ ನೇ. ಮೊಬೈಲ್ ನಂ: 8123921087

ವೇಣೂರು ಹೋಬಳಿ: ಭೀಮರಾಯ ಸೊಡಗಿ, ಮೊಬೈಲ್ ನಂ: 9741713598

ಕೊಕ್ಕಡ ಹೋಬಳಿ: ಮಲ್ಲಿನಾಥ ಬಿರಾದಾರ, ಮೊಬೈಲ್ ನಂ: 9986411477

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು: ಕೆ.ಎಸ್‌. ಚಂದ್ರಶೇಖರ್, ಮೊಬೈಲ್ ನಂ: 9448336863

Related posts

ಉಜಿರೆ : ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Suddi Udaya

ಮರೋಡಿ: ಯುವಕನ ಧ್ವನಿ ಪೆಟ್ಟಿಗೆಯ ಶಸ್ತ್ರಚಿಕಿತ್ಸೆಗೆ ಯುವವಾಹಿನಿ ವೇಣೂರು ಘಟಕ ಹಾಗೂ ಯುವವಾಹಿನಿ ಮರೋಡಿ ಸಂಚಲನಾ ಸಮಿತಿ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಎಸ್‌.ಡಿ‌.ಎಂ. ನ್ಯಾಚುರೋಪಥಿ ಮತ್ತು ಯೋಗ ಸೈನ್ಸ್‌ ಕಾಲೇಜಿನಲ್ಲಿ ವಿಶ್ವ ಏಡ್ಸ್‌ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya

ಚಿಕ್ಕಮಗಳೂರಿನಲ್ಲಿ ಕಳ್ಳತನವಾದ ಓಮಿನಿ ಕಾರು ಉಜಿರೆಯಲ್ಲಿ ಪತ್ತೆ: ಮಾಲೀಕನ ಸ್ನೇಹಿತರ ಮೂಲಕ 10 ದಿನದಲ್ಲಿ ಕಾರು ಪತ್ತೆ

Suddi Udaya

ಮೊಗ್ರು ಸರಕಾರಿ ಶಾಲೆಯಲ್ಲಿ ಆಂ.ಮಾ. ಶಿಕ್ಷಣ ನೀಡಲು ಅನುಮತಿ: ಟ್ರಸ್ಟ್ ನ ಪ್ರಯತ್ನ | ಶಾಸಕರ ಸಾಥ್ | ಸರಕಾರದ ನಿರ್ಧಾರ

Suddi Udaya
error: Content is protected !!