30.7 C
ಪುತ್ತೂರು, ಬೆಳ್ತಂಗಡಿ
May 17, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

ಶ್ರೀ ಧ.ಮಂ ಪ.ಪೂ ಕಾಲೇಜು : ರಾ. ಸೇ ಯೋಜನಾ ದಿನಾಚರಣೆ ಹಾಗೂ ಪ್ರಾಚಾರ್ಯರಿಗೆ ಅಭಿನಂದನೆ

Suddi Udaya

ಮೇಲಂತಬೆಟ್ಟು: ಬೈಕ್ ಗಳೆರಡು ಮುಖಾಮುಖಿ ಡಿಕ್ಕಿ: ನಾಲ್ವರಿಗೆ ಗಂಭೀರ ಗಾಯ

Suddi Udaya

ಲಾಯಿಲ ಗಾಂಧಿನಗರದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ರೂ 3 ಲಕ್ಷ ದಂಡ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ: ನೃತ್ಯ ಸ್ಪರ್ಧೆಯಲ್ಲಿ ಬೀಟ್ ರಾಕರ್ಸ್ ತಂಡಕ್ಕೆ ಹಲವು ಪ್ರಶಸ್ತಿ

Suddi Udaya

ಕನ್ಯಾಡಿ: ಪ್ರಗತಿಪರ ಕೃಷಿಕ ಬೊಲ್ಲೊಟ್ಟು ಬಾಬು ಶೆಟ್ಟಿ ನಿಧನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!