23.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಗೆ ಶೇ. 91.83% ಫಲಿತಾಂಶ

Suddi Udaya

ಮೂಡುಕೋಡಿ ಶ್ರೀ ಸತ್ಯ ಸಾರಮಾನಿ ದೈವಸ್ಥಾನದ ಆಡಳಿತ ಸಮಿತಿಯಿಂದ ಡಾ| ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಮಾ.31-ಎ.4: ಸುಲ್ಕೇರಿ ನಾವರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಮಾ.31 ವೈಭವಯುತ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Suddi Udaya

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ

Suddi Udaya

ಶಿರ್ಲಾಲು : ಮಜಲಪಲ್ಕೆ ನಿವಾಸಿ ಹರಿಶ್ಚಂದ್ರ ಪೂಜಾರಿ ರವರಿಗೆ ಬಿಜೆಪಿ ಗ್ರಾಮ ಸಮಿತಿಯ ಸದಸ್ಯರಿಂದ ಆರ್ಥಿಕ ನೆರವು

Suddi Udaya

ಕುತ್ಲೂರು ಗ್ರಾಮ ಅರಣ್ಯ ಸಮಿತಿಯ ವಾರ್ಷಿಕ ಮಹಾಸಭೆ

Suddi Udaya
error: Content is protected !!