July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಿಡಿಗಲ್-ಪಜಿರಡ್ಕ ಕಾಂಕ್ರೀಟ್ ರಸ್ತೆಯಲ್ಲಿ ಕುಸಿತ ಭೀತಿ

ಬೆಳ್ತಂಗಡಿ : ನಿಡಿಗಲ್ ನಿಂದ ಪಜಿರಡ್ಕಮೂಲಕ ಕನ್ಯಾಡಿಯನ್ನು ಸಂಪರ್ಕಿಸುವ ಕಲ್ಮಂಜ ಗ್ರಾಮದ ಗುಮಟಬೈಲು ಎಂಬಲ್ಲಿ ಕಾಂಕ್ರೀಟ್ ರಸ್ತೆ ಕುಸಿಯುವ ಭೀತಿ ಎದುರಾಗಿದೆ.

ಇಲ್ಲಿನ ಪರಿಸರದ ರಸ್ತೆಯು ಎತ್ತರದಲ್ಲಿದ್ದು ಅದರ ಬುಡ ಭಾಗದ ಮಣ್ಣು ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದ ಸವಕಳಿಗೊಂಡಿದ್ದು ರಸ್ತೆಯಲ್ಲಿ 10 ಅಡಿಗಳಿಗಿಂತ ಅಧಿಕ ಉದ್ದಕ್ಕೆ ಹಾಗೂ ಎರಡು ಅಡಿಯಷ್ಟು ಅಗಲ ಪ್ರದೇಶದಲ್ಲಿ ಕುಸಿದಿದೆ ಇದರಿಂದ ಅಷ್ಟು ಸ್ಥಳದ ಕಾಂಕ್ರೀಟ್ ಗೆ ಬುಡ ಭಾಗದಲ್ಲಿ ಆಧಾರ ಇಲ್ಲದಂತಾಗಿದೆ.

ಮುಂದಿನ ದಿನಗಳಲ್ಲಿ ಮಳೆ ಸುರಿವಾಗ ಈ ರಸ್ತೆಯ ಭಾಗ ಸಂಪೂರ್ಣ ಕುಸಿದು ಬೀಳುವ ಸಾಧ್ಯತೆ ಇದೆ ಪ್ರಸ್ತುತ ಘನವಾಹನಗಳು ಸಂಚರಿಸಿದರು ರಸ್ತೆ ಕುಸಿಯಬಹುದು. ರಸ್ತೆಯ ಇಕ್ಕೆಲಗಳಲ್ಲೂ ಚರಂಡಿ ನಿರ್ಮಿಸಲು ಜಾಗವಿಲ್ಲದ ಕಾರಣ ಇಲ್ಲಿ ಮಳೆ ನೀರು ರಸ್ತೆ ಮೂಲಕವೇ ಹರಿದು ಕುಸಿತ ಉಂಟಾದ ಜಾಗದ ಮೂಲಕವೇ ನೀರು ಮುಂದುವರಿಯುತ್ತದೆ. ಇದು ಹೆಚ್ಚಿನ ಮಣ್ಣಿನ ಸವಕಳಿಗೆ ಕಾರಣವಾಗುತ್ತಿದೆ.

Related posts

“ಬದಲಾವಣೆಯ ಶಿಕ್ಷಣ ಭವಿಷ್ಯದ ನಿರ್ಮಾಣ” ನೂತನ ಶೈಕ್ಷಣಿಕ ವರ್ಷ ಪ್ರಾರಂಭ: ವಿದ್ಯಾದೇಗುಲಗಳಲ್ಲಿ ಮಕ್ಕಳ ಕಲರವ: ಪಿಎಂಶ್ರೀ ಸ.ಮಾ.ಹಿ.ಪ್ರಾ. ಶಾಲೆಯಲ್ಲಿ ತಾ.ಮಟ್ಟದ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ

Suddi Udaya

ಪಟ್ರಮೆ: ಪಟ್ಟೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಅಧ್ಯಕ್ಷರಾಗಿ ಯೋಗೀಶ್ ಗೌಡ, ಕಾರ್ಯದರ್ಶಿಯಾಗಿ ಜಯಾನಂದ

Suddi Udaya

ಪ್ರಬಂಧ ಸ್ಪರ್ಧೆ: ಕುಂಭ ಶ್ರೀ ವಿದ್ಯಾರ್ಥಿಗಳಿಗೆ ಬಹುಮಾನ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆಯ ಅನುಮತಿ ದೊರಕಿರುವ ಬಗ್ಗೆ ಎಕ್ಸೆಲ್ ಟೆಕ್ನೋ ಸ್ಕೂಲ್ ನಿಂದ ಸ್ಪಷ್ಟೀಕರಣ

Suddi Udaya
error: Content is protected !!